Home ದಾವಣಗೆರೆ ಖಾತೆ ಆಕಾಂಕ್ಷಿಗಳಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೆಸರು ಮುಂಚೂಣಿಯಲ್ಲಿ: ಕರ್ನಾಟಕದಲ್ಲಿ ಕೈ ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಸರತ್ತು
ದಾವಣಗೆರೆನವದೆಹಲಿಬೆಂಗಳೂರು

ಖಾತೆ ಆಕಾಂಕ್ಷಿಗಳಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೆಸರು ಮುಂಚೂಣಿಯಲ್ಲಿ: ಕರ್ನಾಟಕದಲ್ಲಿ ಕೈ ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಸರತ್ತು

Share
ಸಿದ್ದರಾಮಯ್ಯ
Share

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುಕಾಲದಿಂದ ನಿರೀಕ್ಷಿಸಲಾಗುತ್ತಿದ್ದ ಆಡಳಿತ ಸೂತ್ರ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಬುಧವಾರ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ, ನೂತನ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಹಾಗೂ ನಾಯಕರ ವಲಯದಲ್ಲಿ ಭಾರಿ ಪೈಪೋಟಿ ಮತ್ತು ಒಲಲ ಕಸರತ್ತು ಶುರುವಾಗಿದೆ.

ವಿಶೇಷವಾಗಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ (MLC) ಯತೀಂದ್ರ ಸಿದ್ದರಾಮಯ್ಯ ಅವರು ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ತಮಗೆ ಹೈಕಮಾಂಡ್ ಈಗಾಗಲೇ ಸಚಿವ ಸ್ಥಾನದ ಭರವಸೆ ನೀಡಿದೆ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಉತ್ತರ ಕರ್ನಾಟಕ ಭಾಗದ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿದ್ದು, ಶಾಸಕ ಬಸವರಾಜ್ ಶಿವಣ್ಣನವರ್ ಸೇರಿದಂತೆ ಹಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

ಪಕ್ಷದ ಆಂತರಿಕ ಭಿನ್ನಮತ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಇಬ್ಬರು ಅಥವಾ ಮೂವರು ಉಪಮುಖ್ಯಮಂತ್ರಿಗಳನ್ನು (DCM) ನೇಮಿಸುವ ಸೂತ್ರವನ್ನು ಪರಿಶೀಲಿಸುತ್ತಿದೆ. ಇದರಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles