Home ಕ್ರೈಂ ನ್ಯೂಸ್ ದಾವಣಗೆರೆಯ ಅಂಗನವಾಡಿ, ಹಾಸ್ಟೆಲ್, ಬಿಸಿಯೂಟ ಕೇಂದ್ರಗಳ ಪರಿಶೀಲನೆ; ದಾಸ್ತಾನು ವ್ಯತ್ಯಾಸ ಪತ್ತೆ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆಯ ಅಂಗನವಾಡಿ, ಹಾಸ್ಟೆಲ್, ಬಿಸಿಯೂಟ ಕೇಂದ್ರಗಳ ಪರಿಶೀಲನೆ; ದಾಸ್ತಾನು ವ್ಯತ್ಯಾಸ ಪತ್ತೆ!

Share
ದಾವಣಗೆರೆ
Share

ದಾವಣಗೆರೆ: ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಹೆಚ್. ಕೃಷ್ಣ ಅವರ ನೇತೃತ್ವದ ತಂಡವು ದಾವಣಗೆರೆಯಲ್ಲಿನ ವಿವಿಧ ನ್ಯಾಯಬೆಲೆ ಅಂಗಡಿ, ಅಂಗನವಾಡಿ, ಹಾಸ್ಟೆಲ್ ಮತ್ತು ಶಾಲೆಯಲ್ಲಿನ ಬಿಸಿಯೂಟ ನೀಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.

ದಾಸ್ತಾನು ಪರಿಶೀಲನೆ:

ನ್ಯಾಯಬೆಲೆ ಅಂಗಡಿಯಲ್ಲಿ ದಾಸ್ತಾನು ವ್ಯತ್ಯಾಸದ ಪರಿಶೀಲನೆ, ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರದಲ್ಲಿ ಗುಣಮಟ್ಟ, ಪರಿಮಾಣದ ಕೊರತೆ, ಶಾಲೆಯಲ್ಲಿ ನೀಡಲಾಗುತ್ತಿರುವ ಆಹಾರ ಧಾನ್ಯಗಳ ದಾಸ್ತಾನಿನಲ್ಲಿ ವ್ಯತ್ಯಾಸವನ್ನು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಪತ್ತೆಹಚ್ಚಿ ಪರಿಶೀಲನೆ ನಡೆಸಿದರು.

ಎಲ್ಲೆಲ್ಲಿ ಪರಿಶೀಲನೆ:

ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಪ್ರತ್ಯೇಕವಾಗಿ ದೇವರಾಜ್ ಅರಸ್ ನಗರದಲ್ಲಿನ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ನ್ಯಾಯಬೆಲೆ ಅಂಗಡಿ, ಶೇಖರಪ್ಪ ನಗರದ ನ್ಯಾಯಬೆಲೆ ಅಂಗಡಿ, ಜೆ.ಎಚ್.ಪಟೇಲ್ ಬಡಾವಣೆಯಲ್ಲಿನ ಎಸ್.ಟಿ.ಹಾಸ್ಟೆಲ್, ಎಸ್.ಪಿ.ಎಸ್.ನಗರದಲ್ಲಿನ ಸರ್ಕಾರಿ ಪ್ರೌಢಶಾಲೆ, ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ಪರಿಶೀಲನೆ ನಡೆಸಿದರು.

ಆಯೋಗದ ಸದಸ್ಯರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *