Home ದಾವಣಗೆರೆ ದೋಹಾ ಬಂದರಿನಲ್ಲಿ ಸಿಲುಕಿದ ಕರ್ನಾಟಕದ 8 ಪ್ರವಾಸಿಗರು: ರಕ್ಷಣೆಗೆ ಕೇಂದ್ರಕ್ಕೆ ಸಚಿವ ಎಸ್ ಎಸ್ ಎಂ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮನವಿ
ದಾವಣಗೆರೆನವದೆಹಲಿಬೆಂಗಳೂರು

ದೋಹಾ ಬಂದರಿನಲ್ಲಿ ಸಿಲುಕಿದ ಕರ್ನಾಟಕದ 8 ಪ್ರವಾಸಿಗರು: ರಕ್ಷಣೆಗೆ ಕೇಂದ್ರಕ್ಕೆ ಸಚಿವ ಎಸ್ ಎಸ್ ಎಂ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮನವಿ

Share
ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕದ ಎಂಟು ಮಂದಿ ಭಾರತೀಯ ಪ್ರವಾಸಿಗರು ಹಳೆಯ ದೋಹಾ ಬಂದರಿನಲ್ಲಿ ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಎಂಟು ಮಂದಿ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆ ತರುವಂತೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

ಪ್ರವಾಸಿಗರ ವಿವರ:

ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.

ಸರ್ಕಾರದ ಮಧ್ಯಪ್ರವೇಶ:

ಕೇಂದ್ರ ವಿದೇಶಾಂಗ ಸಚಿವರಾದ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಸಂಬಂಧಿತ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ ಪ್ರವಾಸಿಗರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ:

ಸಿಲುಕಿಕೊಂಡಿರುವ ಪ್ರವಾಸಿಗರ ಸುರಕ್ಷತೆ ಹಾಗೂ ಶೀಘ್ರ ವಾಪಸ್ಸಿಗಾಗಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ ಎಂದು ಸಚಿವರು ಹಾಗೂ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *