ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಕಾನೂನು ಹೋರಾಟ ಮುಂದುವರಿಸ್ತೇವೆ”: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ

On: October 30, 2024 12:03 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-10-2024

ದಾವಣಗೆರೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ನಮ್ಮ ನೋವು ನಿಂತಿಲ್ಲ. ಸೊಸೆ ಮಗುವಿಗೆ ಜನ್ಮನೀಡಿದ್ದು, ನೋಡಲು ನಾವು ಹರಿಹರಕ್ಕೆ ಬಂದಿದ್ದೇವೆ. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂಬುದು ನಮ್ಮ ಬೇಡಿಕೆ ಎಂದು ಹೇಳಿದರು.

ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಹೋರಾಟ ನಿಲ್ಲದು. ದರ್ಶನ್ ತೂಗುದೀಪರಿಗೆ ಜಾಮೀನು ಸಿಕ್ಕಿದ್ದು ಕಾನೂನು ಪ್ರಕ್ರಿಯೆ. ಹೈಕೋರ್ಟ್ ನೀಡಿರುವ ಆದೇಶಕ್ಕೆ ತಲೆಬಾಗುತ್ತೇವೆ ಎಂದು ಕಾಶಿನಾಥಯ್ಯ ತಿಳಿಸಿದರು.

ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಕೊನೆಯುಸಿರೆಳೆದ ಬಳಿಕ ಎಲ್ಲರೂ ನೋವಿನಲ್ಲಿದ್ದೇವೆ. ಸೊಸೆಯ ಕಣ್ಣೀರು ನಿಲ್ಲುತ್ತಿಲ್ಲ. ಮಗುವಿಗೆ ಜನ್ಮ ನೀಡಿದ್ದರೂ ಪೂರ್ಣ ಪ್ರಮಾಣದ ಖುಷಿ ಇಲ್ಲ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಇರುವ ನೋವು ಸ್ವಲ್ಪವೂ ಕಡಿಮೆಯಾಗಿಲ್ಲ. ತಪ್ಪು ಮಾಡಿದವರು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಬಾರದು. ನಾವು ಹೈಕೋರ್ಟ್ ನಲ್ಲಿ ಹೋರಾಟ ಮಾಡುತ್ತೇವೆ ಎಂದು ಕಾಶಿನಾಥಯ್ಯ ಮಾಹಿತಿ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment