SUDDIKSHANA KANNADA NEWS/ DAVANAGERE/ DATE:16-10-2024
ಬೆಂಗಳೂರು: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024ನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲಾಗುತ್ತಿದೆ.
ಈ ಕೃಷಿ ಮೇಳವನ್ನು ವಿಶೇಷವಾಗಿರುವಂತೆ ರೂಪಿಸಿ ಆಯೋಜಿಸಲಾಗುತ್ತಿದೆ. ವಿಶೇಷವಾಗಿ ಈ ಮೇಳದಲ್ಲಿ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ-ಹೈಡೋಫೋನಿಕ್ ಕೃಷಿ, ಪುಷ್ಪ ಕೃಷಿ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಾವಯವ ಕೃಷಿ, ಅಣಬೆ ಬೇಸಾಯ, ಸಮಗ್ರ ಜಲಾನಯನ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಲ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹವಾಮಾನ ಆಧಾರಿತ ಕೃಷಿ, ಅಡಿಕೆಯಲ್ಲಿ ಬಹುಸ್ತರೀಯ ಪದ್ಧತಿ, ಅಡಿಕೆ ಬೆಳೆಯ ಸಮಗ್ರ ಕೃಷಿ ಪದ್ಧತಿ, ಪಾರಂಪರಿಕ ಅಡಿಕೆ ಸಂಸ್ಕರಣಾ ಕ್ರಮಗಳು, ಅಡಿಕೆಯ ವಿವಿಧ ತಳಿಗಳು, ಅಡಿಕೆ ಸಂಸ್ಕರಣೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಅಲ್ಲದೇ ಶ್ರೇಷ್ಟ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಅಲ್ಲದೇ ಕೃಷಿ ಮೇಳದ ತಾಂತ್ರಿಕ ಸಮಾವೇಶದಲ್ಲಿ ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆಯನ್ನು ಕೊಡಿಸಲಾಗುವುದು.
ಕೃಷಿಯಿಂದ ಪೋಷಕಾಂಶ-ಭರಿತ ಉತ್ಪಾದಕತೆ ಮತ್ತು ಗುಣಮಟ್ಟವನ್ನು ಸುಧಾರಿಸುವ ಮೇಲೆ ಕೇಂದ್ರೀಕರಿಸುವ ಕೃಷಿ ಮತ್ತು ಆಹಾರ ಉತ್ಪಾದನಾ ನೀತಿಗಳು ಅವುಗಳ ಉತ್ಪಾದನೆಯನ್ನು ಹೆಚ್ಚಿಸುತ್ತವೆ ಇದಲ್ಲದೆ, ಈ ಸಮೃದ್ಧ ಪೌಷ್ಟಿಕಾಂಶದ ಪದಾರ್ಥಗಳನ್ನು ಸೇವಿಸುವ ಜನರು ತಮ್ಮ ಪೌಷ್ಟಿಕಾಂಶವನ್ನು ಸುಧಾರಿಸಲು ಮತ್ತು ಆರೋಗ್ಯಕರವಾಗಿ ಬದುಕಲು ನಾಗರಿಕರಿಗೆ ಸಹಾಯ ಮಾಡುತ್ತದೆ. ಆಹಾರವು ಕೃಷಿ ಪದ್ಧತಿಗಳ ಪ್ರಮುಖ ಉಪ ಉತ್ಪನ್ನವಾಗಿದೆ ಮತ್ತು ಇದರ ಪರಿಣಾಮವಾಗಿ, ಆರೋಗ್ಯಕರ ಪೋಷಣೆಯ ಪ್ರಮುಖ ಅಂಶವಾಗಿದೆ. ಹೆಚ್ಚಿನ ಪುರಾವೆಗಳು, ಸಂಶೋಧನೆಯು ಕೇವಲ ಆಹಾರವನ್ನು ಹೊಂದಿರುವುದಕ್ಕಿಂತ ಹೆಚ್ಚಿನ ಪೋಷಣೆಯಿದೆ ಎಂದು ತೋರಿಸುತ್ತದೆ.
ಜನರು ಸೇವಿಸುವ ಆಹಾರವು ಪೌಷ್ಟಿಕವಾಗಿರಬೇಕು ಅಂದರೆ, ಆಹಾರವು ಸರಿಯಾದ ಬೆಳವಣಿಗೆ ಮತ್ತು ಬೆಳವಣಿಗೆಗೆ ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಅಂಶಗಳನ್ನು ಮತ್ತು ಪೋಷಣೆಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಸೇವಿಸುವ ಆಹಾರವು ಸರಿಯಾದ ಪೋಷಕಾಂಶಗಳೊಂದಿಗೆ ಸಮತೋಲನದಲ್ಲಿರಬೇಕು. ಈ ಸಂದರ್ಭದಲ್ಲಿ ಅತಿ ಹೆಚ್ಚು ಸೂಕ್ತ ರಾಗಿ, ಜೋಳ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ವಿಕಸಿತ ಕೃಷಿಯನ್ನು ಕಾಪಾಡಿಕೊಳ್ಳಲು ಸಾದ್ಯವಾಗುತ್ತದೆ ಎಂಬಂತಹ ವಿಚಾರಗಳನ್ನು ಈ ಕೃಷಿ-ತೋಟಗಾರಿಕೆ ಮೇಳದಲ್ಲಿ ಮನದಟ್ಟು ಮಾಡಲು ಪ್ರಯತ್ನಿಸಲಾಗುತ್ತಿದೆ.
ಕೃಷಿ ಮತ್ತು ತೋಟಗಾರಿಕಾ ಮೇಳದ ಅಂಗವಾಗಿ ನಡೆಸಲಾಗುವ ಅಕ್ಟೋಬರ್ 18ರಂದು ತಾಂತ್ರಿಕ ಸಮಾವೇಶದಲ್ಲಿ ವಿಕಸಿತ ಕೃಷಿಯಲ್ಲಿ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ, ಅಡಿಕೆ ಬೆಳೆಯಲ್ಲಿ ಸಮಗ್ರ ರೋಗ ನಿರ್ವಹಣೆ, ಅಡಿಕೆ ಉಪಉತ್ಪನ್ನಗಳ ಸದ್ಬಳಕೆ, ಅಡಿಕೆ ಮಾರುಕಟ್ಟೆ ವ್ಯವಸ್ಥೆ ಮತ್ತು ಮೌಲ್ಯವರ್ಧನೆ ಮತ್ತಿತರ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ.
ಅಕ್ಟೋಬರ್ 19ರಂದು ಸಧೃಡ ಭಾರತಕ್ಕಾಗಿ ವಿಕಸಿತ ಕೃಷಿ, ಕೃಷಿಯಲ್ಲಿ ಸುಸ್ಥಿರತೆಗೆ ಅರಣ್ಯ ಕೃಷಿ, ಪಶು ಸಂಗೋಪನೆ-ಆಹಾರ ಭದ್ರತೆ, ಕೃಷಿಯಲ್ಲಿ ಡೋನ್ ಬಳಕೆ. ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ವಿಷಯಗಳ ಬಗ್ಗೆ ವಿಜ್ಞಾನಿಗಳು,
ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ.
ಅಕ್ಟೋಬರ್ 20ರಂದು ವೈಜಾನಿಕ ಶುಂಠಿ ಮತ್ತು ಕಾಳುಮೆಣಸು ಕೃಷಿ, ಕಾಳುಮೆಣಸು ಕೃಷಿ- ರೈತರ ಅನುಭವ, ಗೋಡಂಬಿ ಬೆಳೆ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಸಾಂಬಾರು ಬೆಳೆಗಳ ಮೌಲ್ಯವರ್ಧನೆ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ. ಇದರ ಜೊತೆಯಲ್ಲಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಅಲ್ಲದೇ ಕೃಷಿ ಮೇಳದ ಸಂದರ್ಭದಲ್ಲಿ ಕೃಷಿ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಯ ‘ಸಸ್ಯಕಾಶಿ’ಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿನ ಕೃಷಿ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಶಾಸಕರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ಅಲ್ಲದೆ ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಮತ್ತು ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಹ ಕೈಪಿಡಿಗಳ ಬಿಡುಗಡೆ
ಮಾಡಲಾಗುವುದು ಅಲ್ಲದೇ ಕೃಷಿ ಪರಿಕರ ವಿತರಕರು, ವಿಜ್ಞಾನಿಗಳು ಹಾಗೂ ಪ್ರಗತಿಪರ ರೈತ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ.
ಈ ಮೇಳದಲ್ಲಿ ಮೀನುಗಾರಿಕೆ, ಯಂತ್ರೋಪಕರಣಗಳು, ಪಶು ಸಂಗೋಪನೆ ಸೇರಿದಂತೆ ವಿವಿಧ ರೀತಿಯ 200ಕ್ಕೂ ಹೆಚ್ಚಿನ ಸ್ಟಾಲ್ಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಮಾಹಿತಿ ನೀಡಿದ್ದಾರೆ.