ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೆಎಸ್​ಆರ್​ಟಿಸಿ ಗುಡ್ ನ್ಯೂಸ್ : ಹಬ್ಬಕ್ಕೆ ಪ್ರಯಾಣಿಕರಿಗೆ 1500 ಹೆಚ್ಚುವರಿ ಬಸ್

On: September 4, 2024 9:53 AM
Follow Us:
---Advertisement---

ಬೆಂಗಳೂರು : ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ.

ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ ಸ್ಥಳಗಳಿಗೆ ಹೆಚ್ಚುವರಿ 1,500 ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಘೋಷಿಸಿದೆ.

ಎಸ್‌ಆರ್‌ಟಿಸಿ ವಿಶೇಷ ಬಸ್​​ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಲವು ಪ್ರಮುಖ ಸ್ಥಳಗಳಿಗೆ ಸಂಚರಿಸಲಿವೆ. ತಿರುಪತಿ, ವಿಜಯವಾಡ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮತ್ತು ಹೈದರಾಬಾದ್ ಸೇರಿದಂತೆ ಇತರೆ ಕಡೆಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್​​ಗಳು ಸಂಚರಿಸಲಿದೆ.

ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಪಿರಿಯಾಪಟ್ಟಣ, ವಿರಾಜಪೇಟೆ, ಮೈಸೂರು, ಹುಣಸೂರು, ಕುಶಾಲನಗರ ಮತ್ತು ಮಡಿಕೇರಿ ಸೇರಿದಂತೆ ಪ್ರಮುಖ ಸ್ಥಳಗಳಿಗೆ ತೆರಳಲಿವೆ ಎಂದು ಕೆಎಸ್ಆರ್​​ಟಿಸಿ ತಿಳಿಸಿದೆ.

ವಿಶೇಷ ಬಸ್​​ಗಳಿಗೆ ಟಿಕೆಟ್ ಬುಕಿಂಗ್ ಹೇಗೆ?

ವಿಶೇಷ ಹಾಗೂ ಹೆಚ್ಚುವರಿ ಬಸ್​ಗಳ ಪ್ರಯಾಣದ ಸಮಯ ಹಾಗೂ ದರದ ಬಗ್ಗೆ ಕೆಎಸ್‌ಆರ್‌ಟಿಸಿ ಮೊಬೈಲ್​ ಆ್ಯಪ್​ ಹಾಗೂ https://www.ksrtc.in/ ವೆಬ್​ಸೈಟ್​​ ಮೂಲಕ ಸಂಸ್ಥೆ ಮಾಹಿತಿ ನೀಡಲಿದೆ. ಇವುಗಳ ಮೂಲಕವೇ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಕರ್ನಾಟಕದಾದ್ಯಂತ ಬಸ್​​ ನಿಲ್ದಾಣಗಳಲ್ಲಿನ ಹಾಗೂ ನೆರೆ ರಾಜ್ಯಗಳ ಕೆಎಸ್‌ಆರ್‌ಟಿಸಿ ಕೌಂಟರ್​ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಒಬ್ಬ ವ್ಯಕ್ತಿಯು ಒಂದು ಬುಕಿಂಗ್​ಗೆ 4 ಅಥವಾ 5 ಮಂದಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ 5ರ ರಿಯಾಯಿತಿ ನೀಡುವುದಾಗಿಯೂ ಕೆಎಸ್‌ಆರ್‌ಟಿಸಿ ಘೋಷಿಸಿದೆ. ರಿಟರ್ನ್ ಟಿಕೆಟ್ ಕೂಡ ಒಟ್ಟಿಗೇ ಕಾಯ್ದಿರಿಸಿದರೆ ಶೇ 10ರ ರಿಯಾಯಿತಿ ದೊರೆಯಲಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment