SUDDIKSHANA KANNADA NEWS/ DAVANAGERE/ DATE:13-01-2025
ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವೆಂಕಟಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮಹಿಳೆಯು ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಸಕಲೇಶಪುರ ತಾಲೂಕು ವೀರಶೈವ ಸಮಾಜದ ಯುವ ವೇದಿಕೆಯ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ 35 ವರ್ಷದ ದೀಪಾ ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ದೀಪಾ ಅವರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಹಾನುಬಾಳು ಹೋಬಳಿಯ ವೆಂಕಟಹಳ್ಳಿ ಗ್ರಾಮದ ದೀಪ ಅವರು ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ತೀವ್ರ ಹೃದಯಘಾತ ಆಗಿದೆ. ಈ ವೇಳೆ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಮನೆಯವರು ಕೂಡಲೇ ಸಕಲೇಶಪುರ ತಾಲ್ಲೂಕಿನ
ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟರೊಳಗೆ ಉಸಿರು ನಿಂತಿದೆ ಎಂದು ವೈದ್ಯರು ತಿಳಿಸಿದ್ದಾರೆ.