• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Monday, May 19, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕೊಟ್ಟ ಭರವಸೆ ಈಡೇರಿಸಿದ ಎಸ್. ಎಸ್. ಮಲ್ಲಿಕಾರ್ಜುನರ ಜೊತೆ ಸದಾ ಇರೋಣ: ಗಡಿಗುಡಾಳ್ ಮಂಜುನಾಥ್

Editor by Editor
January 14, 2025
in ದಾವಣಗೆರೆ
0
ಕೊಟ್ಟ ಭರವಸೆ ಈಡೇರಿಸಿದ ಎಸ್. ಎಸ್. ಮಲ್ಲಿಕಾರ್ಜುನರ ಜೊತೆ ಸದಾ ಇರೋಣ: ಗಡಿಗುಡಾಳ್ ಮಂಜುನಾಥ್

SUDDIKSHANA KANNADA NEWS/ DAVANAGERE/ DATE:14-01-2025

ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಎಸ್ ಎಸ್ ಎಂ ಬಾಸ್ಕೆಟ್ ಬಾಲ್ ಕ್ಲಬ್ ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕ್ಲಬ್ ನ ನೂತನ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಅವರು ಮಾತನಾಡಿ ಕ್ರೀಡಾ ಸಚಿವರಾಗಿದ್ದಾಗ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿದ್ದರು. ಕ್ರೀಡಾಸಕ್ತರೂ ಆಗಿದ್ದರಿಂದ
ಕ್ರೀಡಾಪಟುಗಳಿಗೆ ನೆರವು ನೀಡಿದ್ದರು. ಬಾಸ್ಕೆಟ್ ಬಾಲ್ ಆಟಕ್ಕೆ ಒಳಾಂಗಣ ಕ್ರೀಡಾಂಗಣದ ಅವಶ್ಯಕತೆ ಇದ್ದು, ಇದಕ್ಕೆ ಅನುದಾನವನ್ನೂ ಬಿಡುಗಡೆ ಮಾಡಿಸಿಕೊಡುವಲ್ಲಿ ಸಚಿವರು ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್. ಎಸ್.
ಎಂ. ಬಾಸ್ಕೆಟ್ ಬಾಲ್ ಕ್ಲಬ್ ಅಸ್ತಿತ್ವಕ್ಕೆ ಬಂದಿದ್ದು, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೌರವಾಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

ಬಾಸ್ಕೆಟ್ ಬಾಲ್ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದ್ದು, ಎಲ್ಲಾ ರೀತಿಯ ನೆರವು ನೀಡಲು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಮ್ಮತಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅಭಿವೃದ್ಧಿ ಹರಿಕಾರರೂ ಹೌದು. ಗ್ಲಾಸ್ ಹೌಸ್ ಇಂದಿಗೂ ಎಲ್ಲರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಅದೇ ರೀತಿಯಲ್ಲಿ ಕುಂದುವಾಡ ಕೆರೆ ಹಾಗೂ ಟಿಬಿ ಸ್ಟೇಷನ್ ಅಭಿವೃದ್ಧಿಪಡಿಸಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕ್ರಮ ವಹಿಸಿದ್ದಾರೆ. ರಸ್ತೆಗಳು, ಉದ್ಯಾನವನಗಳು ಸೇರಿದಂತೆ ನಗರದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳುವಂತೆ ದಾವಣಗೆರೆ ಮಾಡಲು ಕಾರಣೀಕರ್ತರು ಎಸ್. ಎಸ್. ಮಲ್ಲಿಕಾರ್ಜುನ್ ಅವರು. ಅಭಿವೃದ್ಧಿ ವಿಚಾರದಲ್ಲಿ ಎಸ್ ಎಸ್ ಎಂ ಅವರಿಗೆ ದೂರದೃಷ್ಟಿತ್ವ ಎಲ್ಲರಿಗೂ ಗೊತ್ತಿರುವ ವಿಚಾರ. ಇಂಥ ನಾಯಕರು, ಜನಪ್ರತಿನಿಧಿಗಳ ಅವಶ್ಯಕತೆ ಇದೆ. ಅಭಿವೃದ್ಧಿ ಪರ ಇರುವವರನ್ನು ನಾವು ಕಳೆದುಕೊಳ್ಳಬಾರದು. ಸದಾ ಇವರ ಪರವಾಗಿ ಎಲ್ಲರೂ ನಿಲ್ಲಬೇಕಿದೆ ಎಂದು ಕರೆ ನೀಡಿದರು.

ಕ್ಲಬ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್ ಸಾಬ್ ಅವರು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭ ಕೋರಿದರು. ಸಂಕ್ರಾಂತಿ ಹಬ್ಬವೂ ಎಲ್ಲರಿಗೂ ಒಳಿತನ್ನು ಮಾಡಲಿ. ಎಸ್. ಎಸ್. ಎಂ. ಬಾಸ್ಕೆಟ್ ಬಾಲ್ ಕ್ಲಬ್ ಉದ್ಘಾಟನೆ ನೆರವೇರಿಸಿದ್ದು ಖುಷಿ ತಂದಿದೆ. ಎಸ್. ಎಸ್. ಮಲ್ಲಿಕಾರ್ಜುನ್ ಅವರ ಶ್ರಮದಿಂದ ದಾವಣಗೆರೆ ನಗರವು ಇಷ್ಟೊಂದು ಅಭಿವೃದ್ಧಿ ಹೊಂದಿದೆ. ಅವರ ನಾಯಕತ್ವದಲ್ಲಿ ನಾವು ಮುನ್ನಡೆಯುತ್ತಿರುವುದು ನಮ್ಮ ಪಾಲಿನ ಪುಣ್ಯ ಎಂದು ಹೇಳಿದರು.

ಕ್ಲಬ್ ಉಪಾಧ್ಯಕ್ಷರಾದ ಸಂಕೇತ್, ಸಿದ್ದೇಶ್, ಕಾರ್ಯದರ್ಶಿ ಕೆ. ಎಂ. ಪ್ರವೀಣ್, ಖಜಾಂಚಿ ಪ್ರಸನ್ನ, ಎಸ್ ಎಸ್ ಎಮ್ ಬಾಸ್ಕೆಟ್ ಬಾಲ್ ಕ್ಲಬ್ ಸದಸ್ಯರು, ಜಿಲ್ಲಾ ಬಾಸ್ಕೆಟ್ ಬಾಲ್ ಕ್ಲಬ್ ಗೌರವಾಧ್ಯಕ್ಷ ಸಿ. ರಾಮಮೂರ್ತಿ, ಅಧ್ಯಕ್ಷ ಕಿರಣ್ ಕುಮಾರ್ ಆರ್., ಉಪಾಧ್ಯಕ್ಷ ವಿಜಯ್ ಕುಮಾರ್, ಕಾರ್ಯದರ್ಶಿ ಆರ್. ವೀರೇಶ್, ಖಜಾಂಚಿ ಪ್ರಸನ್ನ, ತರಬೇತುದಾರರಾದ ದರ್ಶನ್, ಸಚಿನ್, ಸದಸ್ಯರು ಹಾಜರಿದ್ದರು. ಎರಡು ದಿನ ಕಾಲ ಕ್ಲಬ್ ನ ಕ್ರೀಡಾಪಟುಗಳಿಗೆ ಆಯೋಜಿಸಲಾಗಿದ್ದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಬ್ಯಾಗ್ ಅನ್ನು ವಿತರಿಸಲಾಯಿತು.

ಸಂಕ್ರಾಂತಿ ಸಂಭ್ರಮ:

ಇನ್ನು ಕ್ರೀಡಾಂಗಣದಲ್ಲಿ ಗ್ರಾಮೀಣ ಭಾಗದಲ್ಲಿ ಆಯೋಜಿಸಲಾಗುವ ಮಕರ ಸಂಕ್ರಾಂತಿ ಹಬ್ಬದ ಸೊಬಗು ಇಲ್ಲಿಯೂ ಕಂಡು ಬಂತು. ಎಳ್ಳು ಬೆಲ್ಲದ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕ್ಲಬ್ ನ ಸದಸ್ಯರು ಬಿಳಿವಸ್ತ್ರ ಧರಿಸಿ ಗಮನ ಸೆಳೆದರು. ಹಳ್ಳಿ ಪ್ರದೇಶದಂತೆ ಜಿಲ್ಲಾ ಕ್ರೀಡಾಂಗಣ ಸಜ್ಜುಗೊಳಿಸಲಾಗಿತು. ಬಾಸ್ಕೆಟ್ ಬಾಲ್ ಕ್ರೀಡಾಪಟುಗಳು, ಪೋಷಕರು ಹಾಜರಿದ್ದರು. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

 

Next Post
ಮಚ್ಚಿನಿಂದ ತಲೆಗೆ ಹೊಡೆದು ಕೊಲೆ: ಪ್ರಕರಣದ ಪ್ರಮುಖ ಆರೋಪಿ ಸೆರೆ

ಮಚ್ಚಿನಿಂದ ತಲೆಗೆ ಹೊಡೆದು ಕೊಲೆ: ಪ್ರಕರಣದ ಪ್ರಮುಖ ಆರೋಪಿ ಸೆರೆ

Leave a Reply Cancel reply

Your email address will not be published. Required fields are marked *

Recent Posts

  • ‘ರೋಮ್ ಹೊತ್ತಿ ಉರಿಯುತ್ತಿದ್ದರೆ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ’: ಸಂಕಷ್ಟದ ನಡುವೆ ಕೈ ಸರ್ಕಾರ ಸಾಧನೆ ಸಮಾವೇಶ ಹೊರಟಿದೆ!
  • ನೀರ್ಥಡಿ ಐತಿಹಾಸಿಕ ದೇಗುಲ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಅವ್ಯವಸ್ಥೆಗೆ ಕಾಂಗ್ರೆಸ್ ಶಾಸಕ ಬೇಸರ!
  • ಮೂಗಿಗೆ ತುಪ್ಪ ಸವರದೇ ಜನತೆಗೆ ಕೊಟ್ಟ ಭರವಸೆಯಂತೆ ಆಡಳಿತ ನಡೆಯುತ್ತಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ
  • ತಾಳ್ಮೆ, ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ ಚದುರಂಗ: ಗಡಿಗುಡಾಳ್ ಮಂಜುನಾಥ್
  • ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In