ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಹೀಂದ್ರ ಪಿಕ್ ವಾಹನದ ಹಿಂಬದಿ ಟೈರ್ ಸ್ಫೋಟ: ಮಂತ್ರಾಲಯ ಮೂಲದ ಮೂವರು ದುರ್ಮರಣ, ಹಲವರಿಗೆ ಗಾಯ

On: February 26, 2024 10:42 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-02-2024

ದಾವಣಗೆರೆ: ಮಹೀಂದ್ರ ಪಿಕ್ ಅಪ್ ವಾಹನದ ಹಿಂಬದಿ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗದಿಂದ ಹರಿಹರ ಕಡೆ ಹೋಗುವ ಎನ್.ಹೆಚ್ -48 ರಸ್ತೆಯ ಪಂಜಾಬಿ ಡಾಬಾ ಎದುರು ಭಾನುವಾರ ತಡರಾತ್ರಿ ನಡೆದಿದೆ. ಮಂತ್ರಾಲಯ ಮೂಲದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪದ ಸಿಂಗರಾಜನಹಳ್ಳಿ ಗ್ರಾಮದ ತಗರಂ ಈರಣ್ಣ (55), ಪದ್ಮ ಕಡಬೂರು ಮಂಡಲದ ನಾಗಲಾಪುರ ಗ್ರಾಮದ ಪಿಂಜಾರಿ ಮಸ್ತಾನ್ ಸಾಬ್ (55) ಚಿನ್ನ ತುಂಬಳ
ಪಂಚಾಯಿತಿ ವ್ಯಾಪ್ತಿಯ ನಾಗಲಾಪುರ ಗ್ರಾಮದ ಪೆದ್ದವೆಂಕಣ್ಣ (46) ಸಾವು ಕಂಡ ದುರ್ದೈವಿಗಳು. ಹುಸೇನ್, ಬಿ. ಲಿಂಗಣ್ಣ, ಸುಧಾಕರ ಹಾಗೂ ನಾಗಣ್ಣ ಮತ್ತಿತರರು ಗಾಯಗೊಂಡಿದ್ದಾರೆ.

ಘಟನೆ ಹಿನ್ನೆಲೆ ಏನು…?

ಹಾವೇರಿ ಜಿಲ್ಲೆಯ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿರುವಾಗ ಭಾನುವಾರ ರಾತ್ರಿ 11. 25ರ ಸುಮಾರಿಗೆ ಶಾಮನೂರು ಅಂಡರ್ ಪಾಸ್ ದಾಟಿದ ನಂತರ ಬರುವ ದಾವಣಗೆರೆ ಪಂಜಾಬಿ ಡಾಬಾ ಎದುರು ಚಿತ್ರದುರ್ಗದಿಂದ ಹರಿಹರ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ -48ರಲ್ಲಿ ಹುಸೇನ್ ಎಂಬಾತ ಮಹಿಂದ್ರಾ ಪಿಕ್ ಅಪ್ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ತನ್ನ ಪಕ್ಕದ ಸೀಟಿನ ಕ್ಯಾಂಬಿನ್ ನಲ್ಲಿ ಹುಸವಿ, ಹುಸೇನಿ ಮಚ್ಚ ಬಜಾರಿ ಅವರನ್ನು ಕೂರಿಸಿಕೊಂಡು ವಾಹನದಲ್ಲಿ ಮೆಣಸಿನಕಾಯಿ ಲೋಡ್ ಮೇಲೆ ತಗರಂ ಈರಣ್ಣ, ಸುಧಾಕರ, ಪಿಂಜಾರಿ ಮಸ್ತಾನ್ ಸಾಬ್, ಪದ್ಯವಂಕಣ್ಣ ಬೋಯಾ, ಚಿನ್ನರಡ್ಡಿ ಲಿಂಗಣ್ಣ ನಾಗಣ್ಣ ಎಂಬುವವರನ್ನು ಕೂರಿಸಿಕೊಂಡು ತನ್ನ ವಾಹನವನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋದ ಪರಿಣಾಮ ವಾಹನದ ಹಿಂಭಾಗದ ಎಡಬದಿಯ ಟೈರ್ ಬರ್ಸ್ಟ್ ಬರ್ಸ್ ಆಗಿ ವಾಹನ ರಸ್ತೆಯಲ್ಲಿ ಎಡಕ್ಕೆ ಪಲ್ಟಿಯಾಗಿ ಬಿದ್ದಿದೆ.

ವಾಹನದ ಮೇಲಿದ್ದ ತಗರಂ ಈರಣ್ಯ , ಪಿಂಜಾರಿ ಮಸ್ತಾನ್ ಸಾಬ್ , ಪದ್ಮವಂಕಣ , ಬೋಯಾ ಅವರಿಗೆ ಬಲವಾದ ಪಟ್ಟು ಬಿದ್ದು ರಕ್ತಸಿಕ್ತರಾಗಿದ್ದರು. ತಗರಂ ಈರಣ್ಣ, ಪಿಂಜಾಸಿ ಮಸ್ತಾನ್ ಸಾಬ್ ಹಾಗೂ ಪೆದ್ದವೆಂಕಣ್ಣ ಬೋಯಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಾದ ವಾಹನ ಚಾಲಕ ಹುಸೇನ್, ಬಿ. ಲಿಂಗಣ್ಣ, ಸುಧಾಕರ ಹಾಗೂ ನಾಗಣ್ಣ ಅವರ ಮೈಕೈಗೆ ಪೆಟ್ಟು ಬಿದ್ದಿದೆ. ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಲಾಗಿದೆ. ಮೃತರ ಶವಗಳನ್ನು ದಾವಣಗೆರೆ ಸಿಜಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿಕೊಟ್ಟರು. ಈ ಅಪಘಾತಕ್ಕೆ ಕಾರಣನಾದ AP 39 / TV – 1776 ವಾಹನ ಚಾಲಕ ಹುಸೇನ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment