ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಹಿಳೆಯರು ಹೆಚ್ಚು ಕೆಲಸ ಮಾಡಿ, ಆರೋಗ್ಯ ಕಾಪಾಡಿಕೊಳ್ಳಿ: ಹದಡಿ ಶ್ರೀ ಮುರಳಿಧರ ಸಲಹೆ

On: March 6, 2024 7:59 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-03-2024

ದಾವಣಗೆರೆ: ಇಂದಿನ ನಮ್ಮ ಹಳ್ಳಿಗಳಲ್ಲಿ ಕೃಷಿ ಕುಟುಂಬದ ಮಹಿಳೆಯರು ಬೆಳಿಗ್ಗೆ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ನಿರತರಾಗುತ್ತಿದ್ದರು. ಬೀಸುವುದು, ನೀರು ತರುವುದು, ಸಗಣಿ ಬಾಚುವುದು, ಹಾಲು ಕರೆಯುವುದು, ಹೊಲಗಳಲ್ಲಿ ಹೋಗಿ ಕೆಲಸ ಮಾಡುವುದನ್ನು ಮಾಡುತ್ತಿದ್ದರು. ಇದರಿಂದಾಗಿ ಒಳ್ಳೆ ಆರೋಗ್ಯದಿಂದ ಇರುತ್ತಿದ್ದರು ಎಂದು ಹದಡಿ ಮುರಳಿಧರ ಶ್ರೀಗಳು ತಿಳಿಸಿದರು.

ದಾವಣಗೆರೆ ಸಮೀಪದ ಲೋಕಿಕೆರೆ ಗ್ರಾಮದ ಆಯೋಜಿಸಿದ್ದ ಶ್ರದ್ಧಾಂಜಲಿ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಈಗಿನ ಜೀವನ ಶೈಲಿ ತುಂಬಾ ಬದಲಾಗಿ ರೋಗಗಳು ಕೂಡ ಕಾಡುತ್ತಿವೆ. ಮಹಿಳೆಯರು
ದೈನಂದಿನ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ ಎಂದು ಸಲಹೆ ನೀಡಿದರು.

ಸತ್ಯ, ನಿಷ್ಠೆ, ಪ್ರಾಮಾಣಿಕತೆ, ದುಡಿದು ಉಣ್ಣುವ ಶ್ರದ್ಧೆ ಇಂದು ಇಲ್ಲವಾಗಿದೆ. ಇಂದಿನ ನಮ್ಮ ಹಳ್ಳಿಯ ಪರಿಸರದಂತೆ ಜನರು ಒಗ್ಗಟ್ಟಾಗಿ ಸಹಬಾಳ್ವೆಯಿಂದ ಜೀವನ ಸಾಗಿಸಬೇಕೆಂದು ಆಶಿಸಿದ ಅವರು, ಧಾರ್ಮಿಕತೆಯಿಂದ ಒಬ್ಬರಿಗೆ ಸಹಾಯ, ದಾನ, ಧರ್ಮ, ಪರಸ್ಪರ ಕೊಡು ಕೊಳ್ಳುವ ಭಾವ ಬರಬೇಕಾಗಿದೆ ಎಂದರು.

ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಪುರಂದರ ಲೋಕಿಕೆರೆ ಮಾತನಾಡಿ, ಮಕ್ಕಳು ವಿಶ್ವ ಬಾಲವರಿದ್ದಂತೆ. ಮಗು ಹುಟ್ಟುತ್ತಾ ಎಲ್ಲವನ್ನು ಕಲಿಯುತ್ತದೆ. ನಾವು ಅದಕ್ಕೆ ಸುಳ್ಳು ಹೇಳುವುದು ಏನಾದ್ರೂ ಕಲಿಸಿದರೆ ಅದು ಸುಳ್ಳು ಹೇಳುತ್ತದೆ. ಏನಾದ್ರೂ ಜಗಳ ತುಂಟಾಟ ಮಾಡಿದಾಗ ತಿದ್ದಿ ಹೇಳುವುದೇ ಬಿಟ್ಟು ಉತ್ತೇಜನ ನೀಡುವುದು ಸರಿಯಲ್ಲ. ಇದರಿಂದಾಗಿ ಮಕ್ಕಳು ನಾವು ಮಾಡಿದೆಲ್ಲ ಸರಿ ಎಂಬಂತೆ ತಿಳಿದುಕೊಳ್ಳುತ್ತದೆ. ಹಾಗಾಗಿ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳಿಗೆ ಕೇವಲ ಓದಿನ ಬಗ್ಗೆ ಒತ್ತಡ ಹೇರದೇ, ಸಾಮಾನ್ಯ ಜ್ಞಾನ ಹೇಳಿಕೊಡಬೇಕು. ಕೃಷಿ, ಹೊಲ, ಹೈನುಗಾರಿಕೆ ಸೇರಿದಂತೆ ಕೃಷಿಗೆ ಸಂಬಂಧಿತ ವಿಷಯಗಳ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಭೀಮಪ್ಪ, ಗ್ರಾಮ ಪಂಚಾಯತಿ ಸದಸ್ಯ ಓಬಳಪ್ಪ, ಲೋಕಿಕೆರೆ ಸೊಸೈಟಿ ನಿರ್ದೇಶಕ ಈರಪ್ಪ, ಯುವ ಮುಖಂಡ ಓಂಕಾರಪ್ಪ ಮತ್ತಿತರರು ಹಾಜರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment