SUDDIKSHANA KANNADA NEWS/ DAVANAGERE/ DATE:15-01-2025
ದಾವಣಗೆರೆ: ಭೀಮಸಮುದ್ರದ ಜಿ. ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ಹಾಗೂ ಭಾನುವಳ್ಳಿಯ ಸ್ನೇಹ ಸಂಭ್ರಮ ಗೆಳೆಯರ ಬಳಗದ ಸಂಯುಕ್ತಾಶ್ರಯದಲ್ಲಿ ಜಿಎಂಐಟಿ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದೊಂದಿಗೆ ಹರಿಹರ ತಾಲೂಕಿನ ಭಾನುವಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬರುವ 2025ರ ಫೆಬ್ರವರಿ 9 ರಂದು ಬೃಹತ್ ಉದ್ಯೋಗ ಮೇಳವನ್ನು ನಡೆಸಲು ತೀರ್ಮಾನಿಸಲಾಗಿದೆ.
ಭಾನುವಳ್ಳಿ, ಸೇರಿದಂತೆ ಸುತ್ತಮುತ್ತಲಿನ ಸುಮಾರು 24ಕ್ಕೂ ಹೆಚ್ಚು ಗ್ರಾಮಗಳ 3000 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಈ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 3665 ಉದ್ಯೋಗಗಳು ಲಭ್ಯವಿವೆ. ಇದೊಂದು ಬೃಹತ್ ಮಟ್ಟದ ಉದ್ಯೋಗ ಮೇಳ ಆಗಿದೆ ಎಂದು ಬಳಗದ ಗೌರವಾಧ್ಯಕ್ಷ ತೇಜಸ್ವಿ ಕಟ್ಟಿಮನಿ ಟಿ.ಆರ್. ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳು ಈ ಮೇಳದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದರು.
ಈ ಮೇಳವನ್ನು ಮಾಜಿ ಕೇಂದ್ರ ಸಚಿವರಾದ ಡಾ. ಜಿ.ಎಂ. ಸಿದ್ದೇಶ್ವರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಹರಿಹರ ಶಾಸಕರಾದ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಹೆಚ್.ಎಸ್.ಶಿವಶಂಕರ್, ಜಿಲ್ಲಾ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ ಸೇರಿದಂತೆ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಮುಂಚಿತವಾಗಿ https://forms.gle/bMJSynatBZS5jaai6 ಸ್ಕ್ಯಾನ್ ಮೂಲಕ ನೋಂದಣಿ ಮಾಡಿಸಬಹುದಾಗಿದೆ ಎಂದು ಅಧ್ಯಕ್ಷ ಎಚ್.ಎಮ್. ಶಿವಕುಮಾರ್ ಹೇಳಿದ್ದಾರೆ.
ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆ, ಭಾವಚಿತ್ರ ಹಾಗೂ ಅಭ್ಯರ್ಥಿ ಬಯೋಡೇಟಾವನ್ನು ಕನಿಷ್ಠ 5 ರಿಂದ 10 ಪ್ರತಿಗಳು ಸಂದರ್ಶನದ ವೇಳೆ ತೆಗೆದುಕೊಂಡು ಬರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು
ಯಾವುದೇ ಫೀ/ಶುಲ್ಕ ಇರುವುದಿಲ್ಲ. ಉಚಿತ ಪ್ರವೇಶವಿದ್ದು, ಹೆಚ್ಚಿನ ಮಾಹಿತಿಗಾಗಿ 9964461461 ಮತ್ತು 9632135886 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಳಗದ ಉಪಾಧ್ಯಕ್ಷರಾದ ಇ. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಡಿ.ಬಿ.ರಾಮನಗೌಡ, ಸಂಘಟನಾ ಕಾರ್ಯದರ್ಶಿ ಆರ್.ಬಿ. ಫಕ್ಕೀರಪ್ಪ, ನಿರ್ದೇಶಕರಾದ ಪ್ರಶಾಂತ್ ರೆಡ್ಡಿ, ಮಹಿಳಾ
ನಿರ್ದೇಶಕರಾದ ಸರಳ, ಮಂಜುಳಾ, ರೂಪ ಇದ್ದರು.