ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Mayakonda: ಕೊಳೆತು ಹೋದ ತರಕಾರಿ, ಹುಳ ಹಿಡಿದಿರುವ ಟೊಮೊಟೊ, ನವಿಲು ಕೋಸು, ಮುಳಗಾಯಿ, ಗಂಧವೇ ಇಲ್ಲದ ಬೇಳೆ: ಹಾಸ್ಟೆಲ್ ನ ಅವ್ಯವಸ್ಥೆಯ ಕೆಲ ಸ್ಯಾಂಪಲ್ ಅಷ್ಟೇ…!

On: September 6, 2023 9:11 AM
Follow Us:
MAYAKONDA MLA ANGRY
---Advertisement---

SUDDIKSHANA KANNADA NEWS/ DAVANAGERE/ DATE: 06-09-2023

ದಾವಣಗೆರೆ: ತರಕಾರಿ ಕೊಳೆತು ಹೋಗಿವೆ, ಬೇಳೆ ಬೂಸ್ಟ್ ಬಂದಿದೆ. ಟೊಮೊಟೊ, ನವಿಲು ಕೋಸು, ಮುಳಗಾಯಿ ಕೊಳೆತು ಹೋಗಿವೆ. ತರಕಾರಿಯಲ್ಲಿ ಹುಳ ಆಡುತ್ತಿವೆ. ಬೇಳೆಯಲ್ಲಿ ದಿನಿಯಾ ಬಿಟ್ಟರೆ ಏನೂ ಇಲ್ಲ. ನೀವು ಮನೆಯಲ್ಲಿ ಬಳಸುವ ಬೇಳೆ ಹಿಂಗೆ ಇರುತ್ತಾ? ಬೇಳೆಯಲ್ಲಿ ಗಂಧವೂ ಇಲ್ಲ, ಸುಹಾಸನೆಯೂ ಇಲ್ಲ. ಧಾನ್ಯ ಹಾಗೂ ತರಕಾರಿ ಪೂರೈಕೆ ಮಾಡಿರುವುದನ್ನು ಪರಿಶೀಲನೆ ಮಾಡಿದವರು ಯಾರು? ಮಕ್ಕಳು ಇದನ್ನು ತಿನ್ನಲು ಸಾಧ್ಯನಾ…?

MAYAKONDA MLA K. S. BASAVANTHAPPA ANGRY
MAYAKONDA MLA K. S. BASAVANTHAPPA ANGRY

ಇದು ಮಾಯಕೊಂಡ (Mayakonda)ದ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ ಮಾಯಕೊಂಡ ಶಾಸಕ ಕೆ. ಎಸ್. ಬಸವಂತಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿ. 38ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ಗೆ ಬಸವಂತಪ್ಪರು ಭೇಟಿ ನೀಡುತ್ತಿದ್ದಂತೆ ಅವ್ಯವಸ್ಥೆಗಳೇ ಕಣ್ಮುಂದೆ ಬಂದವು. ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಭೇಟಿ ನೀಡಿದ ಬಸವಂತಪ್ಪ ಅವರು, ಹಾಸ್ಟೆಲ್ ನ ದುಃಸ್ಥಿತಿಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನೂ ಓದಿ: 

Mayakonda: 38 ಮಕ್ಕಳು ಅಸ್ವಸ್ಥ, 15 ವಿದ್ಯಾರ್ಥಿನಿಯರು ಸಿಜೆ ಆಸ್ಪತ್ರೆಗೆ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಚಳಿ ಬಿಡಿಸಿದ ಮಾಯಕೊಂಡ ಶಾಸಕ…!

ತಾಲೂಕು ಆರೋಗ್ಯಾಧಿಕಾರಿಗಳು ಸರಿಯಾಗಿ ಪರಿಶೀಲನೆ ನಡೆಸಿಲ್ಲ. ಇಲ್ಲಿಗೆ ಭೇಟಿ ನೀಡಿ ಯಾವ ರೀತಿ ಇದೆ ಎಂದು ನೋಡಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಬೇಳೆ, ತರಕಾರಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ಪರಿಶೀಲಿಸಿದ ಶಾಸಕರು, ಅಧಿಕಾರಿಗಳಿಗೆ ಇದರ ವಾಸನೆ ನೋಡಿ ಎಂದ್ರು. ಮಾತ್ರವಲ್ಲ, ಹುಳ ಹಿಡಿದಿದ್ದ ತರಕಾರಿ ತೋರಿಸಿ ನೋಡಿ ಇಂಥದ್ದನ್ನು ಮಕ್ಕಳು ಸೇವಿಸಲು ಆಗುತ್ತಾ? ಹಾಸ್ಟೆಲ್ ವಾರ್ಡನ್ ಬದಲಾವಣೆ ಮಾಡಿ ಎಂದು ಹೇಳಿದ್ದರೂ ಇದುವರೆಗೆ ಕ್ರಮ ಆಗಿಲ್ಲ. ಯಾಕೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

MAYAKONDA MLA ANGRY
MAYAKONDA MLA ANGRY

ಮೊದಲು ಹಾಸ್ಟೆಲ್ ವಾರ್ಡನ್ ವಿರುದ್ಧ ಕ್ರಮ ಆಗಲೇಬೇಕು. ಕೂಡಲೇ ಸಸ್ಪೆಂಡ್ ಮಾಡಿ ಎಂದು ಶಾಸಕರು ಹೇಳುತ್ತಿದ್ದಂತೆ ಸ್ಥಳದಲ್ಲಿದ್ದವರು ಇದರಲ್ಲಿ ಯಾವ ರಾಜಕೀಯವೂ ಬೇಡ. ವಾರ್ಡನ್ ಹಾಗೂ ಸಿಬ್ಬಂದಿಯನ್ನು ಬದಲಾಯಿಸಿ ಎಂದು ಹೇಳಿದರು. ಅಧಿಕಾರಿಗಳು ಸಹ ಕೊಳೆತು ಹೋದ ತರಕಾರಿ, ಧಾನ್ಯಗಳು ಹಾಗೂ ಅವ್ಯವಸ್ಥೆಯನ್ನು ನೋಡಿದರಲ್ಲದೇ, ಸೂಕ್ತ ಕ್ರಮದ ಭರವಸೆ ನೀಡಿದರು.

ಬೇಳೆಯಲ್ಲಿ ಗಂಧವೂ ಇಲ್ಲ, ಸುವಾಸನೆಯನೂ ಇಲ್ಲ. ಅಧಿಕಾರಿಗಳು ತಮ್ಮ ಮನೆಗೆ ಖರೀದಿಸಿಕೊಂಡು ಹೋಗುವ ಬೇಳೆ ಘಮ ಘಮ ಎನ್ನುತ್ತದೆ. ಮಕ್ಕಳು ಸೇವಿಸುವ ಈ ಬೆೇಳೆ ನೋಡಿದರೆ ದನಿಯಾ ಬಿಟ್ಟರೆ ಏನೂ ಇಲ್ಲ. ಮಸಾಲೆ ಪದಾರ್ಥವೂ
ಸರಿಯಿಲ್ಲ. ಈ ರೀತಿಯಾದ ಅಡುಗೆ ಮಾಡಿದರೆ ಮಕ್ಕಳು ಸೇವಿಸುವುದಾದರೂ ಹೇಗೆ? 150 ಮಕ್ಕಳು ಇಲ್ಲಿದ್ದಾರೆ. ಕೇವಲ 4 ಕೆಜಿ ಬೇಳೆ ತಿಂಗಳಿಗೆ ಸಾಕಾಗುತ್ತಾ? ಅಥವಾ ಒಂದು ದಿನಕ್ಕೆ ಸಾಕಾ? ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಮಕ್ಕಳ
ವಸತಿ, ಉಟೋಪಾಚಾರಕ್ಕೆ ಹಣ ಖರ್ಚು ಮಾಡುತ್ತದೆ. ಇಲ್ಲಿಗೆ ಪೂರೈಕೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದರು.

ಹಾಸ್ಟೆಲ್ ನಲ್ಲಿನ ವ್ಯವಸ್ಥೆ ನೋಡಿದ ಬಳಿಕ ಅಸಮಾಧಾನ ವ್ಯಕ್ತಪಡಿಸಿದ ಬಸವಂತಪ್ಪ ಅವರು, ಹಾಸ್ಟೆಲ್ ಶುಚಿಯಾಗಿರಬೇಕು. ಗುಣಮಟ್ಟದ ಆಹಾರಧಾನ್ಯಗಳು, ತರಕಾರಿ ಬೆಳೆಸಬೇಕು. ಫ್ರೆಶ್ ಆದ ತರಕಾರಿ ಉಪಯೋಗಿಸಲು ಏನಾಗಿದೆ? ಇನ್ನು ಮುಂದೆ ಈ ರೀತಿಯ ಅವ್ಯವಸ್ಥೆ ಕಂಡು ಬಂದರೆ ಸಹಿಸುವ ಪ್ರಶ್ನೆಯೇ ಇಲ್ಲ. ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಆಗಾಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment