SUDDIKSHANA KANNADA NEWS/ DAVANAGERE/ DATE:20-11-2023
ದಾವಣಗೆರೆ: ಗಣಿ, ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನ.21 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.21 ರಂದು ಮ.2 ಗಂಟೆಗೆ ಜಗಳೂರಿಗೆ ಆಗಮಿಸಿ ತಾಲ್ಲೂಕು ವ್ಯಾಪ್ತಿಯ ಬರಪರಿಹಾರ ಕಾಮಗಾರಿಗಳು ಹಾಗೂ ಕುಡಿಯುವ ನೀರಿನ ಯೋಜನೆಗಳ ಕುರಿತು ಸ್ಥಳ ಪರಿಶೀಲನೆ ನಡೆಸುವರು.
ಮಧ್ಯಾಹ್ನ 3 ಗಂಟೆಗೆ ಜಗಳೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬರಪರಿಹಾರ ಕಾರ್ಯಕ್ರಮಗಳ ಪರಿಶೀಲನಾ ಸಭೆ ಮತ್ತು ಜಗಳೂರು ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಜಗಳೂರು ತಾಲ್ಲೂಕಿನ ಪಕ್ಷದ ಕಾರ್ಯಕರ್ತರ ಭೇಟಿ ಮಾಡುವರು. ಸಂಜೆ 6.45 ಗಂಟೆಗೆ ದಾವಣಗೆರೆ ಆಗಮಿಸಿ ವಾಸ್ತವ್ಯ ಹೂಡುವರು