ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಿಥಿಲಗೊಂಡ ಭದ್ರಾ ಕಾಲುವೆಗಳ ಮರು ನಿರ್ಮಾಣಕ್ಕೆ ಶಾಸಕ ಬಸವಂತಪ್ಪ ಆಗ್ರಹ: ವರದಿ ನೀಡುವಂತೆ ಅಧಿಕಾರಿಗಳಿಗೆ ಕೃಷ್ಣಬೈರೇಗೌಡ ಸೂಚನೆ

On: March 1, 2024 5:40 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-03-2024

ದಾವಣಗೆರೆ: ಮಾಯಕೊಂಡ ಕ್ಷೇತ್ರ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಶಿಥಿಲಗೊಂಡ ಕಾಲುವೆಗಳು, ಬ್ರಿಡ್ಜ್ ಗಳನ್ನು ಮರು ನಿರ್ಮಾಣ ಮಾಡಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರವನ್ನು ಒತ್ತಾಯಿಸಿದರು.

ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಕುರಿತು ಧ್ವನಿ ಎತ್ತಿದ ಶಾಸಕ ಕೆ.ಎಸ್.ಬಸವಂತಪ್ಪ, ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ 42 ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದ್ದು, ಈ ಒಟ್ಟು ನೀರಾವರಿ ಪ್ರದೇಶ ರೈತರ ಜೀವನಾಡಿಯಾಗಿದೆ. 1958ರಲ್ಲಿ ನಿರ್ಮಿಸಿದ ಭದ್ರಾ ಕಾಲುವೆಗಳು, ಬ್ರಿಡ್ಜ್ ಗಳು ಶಿಥಿಲಗೊಂಡು ಹಾಳಾಗಿವೆ. ಈವರೆಗೂ ಕಾಲುವೆಗಳು ಮತ್ತು ಬ್ರಿಡ್ಜ್ ಗಳನ್ನು ಮರು ನಿರ್ಮಾಣ ಅಥವಾ ಆಧುನೀಕರಣ ಮಾಡಿಲ್ಲ ಎಂದು ಹೇಳಿದರು.

ಜೊತೆಗೆ 26 ಕಿ.ಮೀ. ದೂರ ಮುಖ್ಯ ಕಾಲುವೆಗಳು ಮತ್ತು 09 ವಿತರಣೆ ಕಾಲುವೆಗಳು ಇವೆ. 178 ಕಾಮಗಾರಿಗಳಿದ್ದರೆ, 7 ಹೊಸ ಕಾಮಗಾರಿ ಮತ್ತು 121 ಹಳೆಯ ಕಟ್ಟಡಗಳ ಕಾಮಗಾರಿಗಳು ಇವೆ. ಈ ಎಲ್ಲಾ ಕಾಮಗಾರಿಗಳನ್ನು 1958ರಲ್ಲಿ ನಿರ್ಮಾಣ ಮಾಡಲಾಗಿದೆ. ಹಾಳಾಗಿರುವ ಕಾಲುವೆಗಳಲ್ಲಿ ನೀರು ಸಮಪರ್ಕವಾಗಿ ಹರಿಯದೆ ರೈತರು ಬೆಳೆ ಬೆಳೆಯಲು ಅನಾನುಕೂಲವಾಗಿದೆ ಎಂದು ತಿಳಿಸಿದರು.

ಈ ಹಿಂದೆ ನಲ್ಕುಂದ ಬಳಿಯಿರುವ ಕಾಲುವೆ ಬ್ರಿಡ್ಜ್ ಹೊಡೆದು ನೀರು ರೈತರ ಗದ್ದೆಗಳಿಗೆ ನುಗ್ಗಿ ಗದ್ದೆಗಳು ಜಲಾವೃತಗೊಂಡು ಫಸಲಿಗೆ ಬಂದ ಭತ್ತ ಹಾಳಾಗಿ ಲಕ್ಷಾಂತರ ರೂ.ನಷ್ಟ ಅನುಭವಿಸುಂತಾಗಿತ್ತು. ಕೂಡಲೇ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಅನುದಾನ ಬಿಡುಗಡೆ ಮಾಡಿ ಬ್ರಿಡ್ಜ್ ನಿರ್ಮಾಣ ಮಾಡಿಸಿ ರೈತರ ಹಿತ ಕಾಪಾಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಶಿಥಿಲಗೊಂಡ ಭದ್ರಾ ಕಾಲುವೆಗಳು ಮತ್ತು ಬ್ರಿಡ್ಜ್ ಗಳನ್ನು ಮರು ನಿರ್ಮಾಣ ಮಾಡಿ ರೈತರ ಹಿತ ಕಾಪಾಡಬೇಕೆಂದು ಮನವಿ ಮಾಡಿದರು.

ಶಾಸಕರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಭದ್ರಾ ಕಾಲುವೆಗಳು ಮತ್ತು ಬ್ರಿಡ್ಜ್ ಗಳನ್ನು ನಿರ್ಮಿಸಿ 60 ವರ್ಷ ಕಳೆದಿದೆ. ಕಾಲ ಕ್ರಮೇಣ ಕಾಲುವೆಗಳು, ಬ್ರಿಡ್ಜ್ ಗಳು ಶಿಥಿಲಗೊಂಡು ರೈತರು ಬೆಳೆ ಬೆಳೆಯಲು ಸಾಕಷ್ಟು ತೊಂದರೆ ಆಗಿದೆ ಎಂದು ರೈತರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಶಾಸಕ ಬಸವಂತಪ್ಪ ಅವರು ಪ್ರಸ್ತಾಪ ಮಾಡಿರುವುದು ಸತ್ಯವಾಗಿದೆ. 1958ರಲ್ಲಿ ನಿರ್ಮಾಣ ಮಾಡಿದ ಕಾಲುವೆಗಳು ಮತ್ತು ಬ್ರಿಡ್ಜ್ ಗಳನ್ನು ಮರು ನಿರ್ಮಾಣ ಮಾಡಬೇಕೇ ಅಥವಾ ಆಧುನೀಕರಣಗೊಳಿಸಬೇಕೆಂಬ ಕುರಿತು ಕಾಲುವೆಗಳು ಮತ್ತು ಬ್ರಿಡ್ಜ್ ಗಳನ್ನು ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಅಧಿಕಾರಿಗಳು ವರದಿ ಸಲ್ಲಿಸಿದ ಮೇಲೆ ಹಣದ ಲಭ್ಯತೆ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅರಣ್ಯ ವಾಸಿಗಳ ರಕ್ಷಣೆಗೆ ಒತ್ತಾಯ

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹೋಬಳಿಯ ಅರಣ್ಯ ಪ್ರದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರು ಕಳೆದ 60 ವರ್ಷಗಳಿಂದ ಮನೆ ಕಟ್ಟಿಸಿಕೊಂಡು ವಾಸವಾಗಿದ್ದಾರೆ. 1975-76ರಲ್ಲಿ ಸೇಂದಿವನ, ಗೋಮಾಳ ಆಗಿತ್ತು. ಅದರ ಹಿಂದೆನೇ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ನಂತರ ಅರಣ್ಯ ವಾಪ್ತಿಗೆ ಬಂದಿವೆ. ಇದರಿಂದ ಅಲ್ಲಿನ ನಿವಾಸಿಗಳಿಗೆ ಬಹಳ ತೊಂದರೆ ಆಗಿದೆ. ಅಲ್ಲದೇ ಅರಣ್ಯ ಅಧಿಕಾರಿಗಳು ಭಾರೀ ಕಿರುಕುಳ ನೀಡುತ್ತಿದ್ದಾರೆ‌. ಇದು ಕೇವಲ ಮಾಯಕೊಂಡ ಕ್ಷೇತ್ರದ ಸಮಸ್ಯೆಯಲ್ಲ, ರಾಜ್ಯದ ಅರಣ್ಯ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬರ ಸಮಸ್ಯೆಯಾಗಿದೆ ಎಂದು ಬಸವಂತಪ್ಪ ತಿಳಿಸಿದರು.

ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಮತ್ತು ಕಾಗೋಡು ತಿಮ್ಮಪ್ಪ ಅವರು ಅರಣ್ಯ ಭೂಮಿ ಉಳುಮೆ ಮಾಡಿದವರು, ಮನೆಗಳನ್ನು ಕಟ್ಟಿಸಿಕೊಂಡವರನ್ನು ರಕ್ಷಣೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಅದೇ ರೀತಿಯಲ್ಲಿ ಕಾಯ್ದೆ ತಿದ್ದುಪಡಿ ತಂದು ಬಡವರನ್ನು ರಕ್ಷಣೆ ಮಾಡಬೇಕೆಂದು ಅಧಿವೇಶನದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಶಿವಮೊಗ್ಗದ ವ್ಯಾಪ್ತಿಯ ಭದ್ರಾವತಿ ವಿಭಾಗದ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿ ವ್ಯಾಪ್ತಿಯ ಶುಂಗಾರಬಾಬು ಗ್ರಾಮದ ಸರ್ವೇ ನಂಬರ್ 16ರಲ್ಲಿ ಶುಂಗಾರಬಾಬು ಮುಳ್ಳುನಾಯಕನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ 44 ಎಕರೆ,34 ಗುಂಟೆ ಒತ್ತುವರಿಯಾಗಿದೆ. ಈ ಒತ್ತುವರಿ ತೆರವಿಗಾಗಿ ಈಗಾಗಲೇ ಅಧಿಕಾರಿಗಳು ನಿಯಮಾನುಸಾರ ಕರ್ನಾಟಕ ಅರಣ್ಯ ಕಾಯ್ದೆ 1960ರಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿ ಮನೆ ಇರಲಿ, ಮತ್ತೊಂದಿರಲಿ ಏಕಾಏಕಿ ತೆರವುಗೊಳಿಸುವುದಿಲ್ಲ. ಈ ಬಗ್ಗೆ ವಿಚಾರಣೆ ಮಾಡಿ ತೆರವುಗೊಳಿಸುವಂತ ಕಾರ್ಯ ಮಾಡುತ್ತಾರೆ. ಈಗ ಶಾಸಕ ಬಸವಂತಪ್ಪ ಅವರು ನಮ್ಮ ಗಮನಕ್ಕೆ ತಂದಿದ್ದಾರೆ. ಅವರೊಂದಿಗೆ ಚರ್ಚಿಸಿ ಕಾಯ್ದೆಯ
ಅನುಸಾರ ಏನೇನು ಮಾಡಬಹುದು ಎಂದು ಕೂಲಂಕುಷವಾಗಿ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment