ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೇ..ರ್ಸಿ ನನ್ಮ…ಕ್ಕಳು ನನ್ನ ಬಗ್ಗೆ ಮಾತಾಡ್ತಾರೆ, ಹಂದಿಗಳನ್ನ ಯಾಕೆ ತೋರಿಸ್ತೀರಾ? ಯತ್ನಾಳ್ ಕೆಂಡ!

On: February 9, 2025 2:28 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-02-2025

ದಾವಣಗೆರೆ: ಬೇ..ರ್ಸಿ ನನ್ಮ..ಕ್ಕಳು ನನ್ನ ಬಗ್ಗೆ ಮಾತಾಡ್ತಾರೆ. ಹಂದಿಗಳು ಮಾತನಾಡಿದ್ದಕ್ಕೆಲ್ಲಾ ಉತ್ತರ ಕೊಡಲ್ಲ. ದಾವಣಗೆರೆಯಲ್ಲಿರುವ ಎರಡು ಹಂದಿಗಳನ್ನು ಯಾಕೆ ತೋರಿಸುತ್ತೀರಾ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹಾಗೂ ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇ ಹುಲಿ, ನಾನೇ ಹಿಂದೂ ನಾಯಕ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಮಾಧ್ಯಮದವರು ಹೇಳಲ್ಲ. ಜನರು ಹೇಳುತ್ತಾರೆ, ಅದಕ್ಕೆ ನೀವು ತೋರಿಸುತ್ತೀರಾ. ನಿಮ್ಮ ಪ್ರೀತಿ ವಿಜಯೇಂದ್ರ ಹಾಗೂ ಯಡಿಯೂರಪ್ಪರ ಮೇಲೆ ಇದೆ. ದಾವಣಗೆರೆಯಲ್ಲಿ ಎರಡು ಹಂದಿಗಳಿವೆ. ಬೆಂಗಳೂರಿನಲ್ಲಿರುವ ವಿಜಯೇಂದ್ರ ಮನೆ ಮುಂದೆ ಟೆಂಟ್ ಹೊಡೆಸಿ ಅಲ್ಲೇ ಕಾದುಕೊಂಡು ಇರಲಿ ಹೇಳಿ ಎಂದು ಗುಡುಗಿದರು.

ನಿತ್ಯವೂ ವಿಜಯೇಂದ್ರನ ಜಪ ಮಾಡಿಕೊಂಡೇ ಇರಲಿ. ಜಯ ಜಯ ವಿಜಯೇಂದ್ರ ನಿನ್ನ ನಾಮವು ನಮಗೆ ಅನುಕೂಲ ಎಂದು ಹೇಳಿಕೊಳ್ಳಲಿ. ತಿರುಗಾಡಿಕೊಂಡು ಇರಲಿ. ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.

ನೀವೇ ಸರ್ವೇ ಮಾಡುತ್ತೀರಲ್ವಾ. ಚುನಾವಣೆ ಬಂದಾಗ ಕರ್ನಾಟಕದಲ್ಲಿ ಬಿಜೆಪಿಗೆ 104 ಸ್ಛಾನ ಬರುತ್ತೆ ಎಂದು. ವಿಜಯೇಂದ್ರ ಕಡೆಗೆ ಸರ್ವೇ ಮಾಡುತ್ತೀರಾ ಮಾಡಿ. ಮುಖ್ಯಮಂತ್ರಿ, ರಾಜ್ಯಾಧ್ಯಕ್ಷ ಹುದ್ದೆ ರೇಸ್ ನಲ್ಲಿ ನಾನೂ ಇದ್ದೇನೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರು ಯಾರು? ದಾವಣಗೆರೆ, ಬೀದರ್ ನಲ್ಲಿ ಸೋಲಿಸಿದವರು ಯಾರು? ನಮಗೂ ಗೊತ್ತು. ತುಮಕೂರಿನಲ್ಲಿ ಸೋಮಣ್ಣ ಸೋಲಿಸಲು ಏನೆಲ್ಲಾ ಮಾಡಿದ್ದರು ಎಂಬುದು ಗೊತ್ತು ಎಂದು ಕಿಡಿಕಾರಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment