ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

9 ವರ್ಷವಾದರೂ ಮೋದಿ ಸರ್ಕಾರ 15 ಲಕ್ಷ ರೂ. ಅಕೌಂಟ್ ಗೆ ಹಾಕಿದೆಯಾ: ಎಸ್. ರಾಮಪ್ಪ ಪ್ರಶ್ನೆ

On: May 30, 2023 11:48 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-05-2023

ದಾವಣಗೆರೆ(DAVANAGERE):ನಮ್ಮ ಯೋಜನೆಗಳ ಬಗ್ಗೆ ಕೇಳುವ ಬಿಜೆಪಿ ನಾಯಕರು (BJP LEADERS) ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ರಾಷ್ಟ್ರದ ಜನತೆಗೆ ತಲಾ ಒಬ್ಬಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ತಿಳಿಸಿ 9 ವರ್ಷ ಕಳೆದರೂ ಅದರ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಮಾಜಿ ಶಾಸಕ ಎಸ್. ರಾಮಪ್ಪ ಪ್ರಶ್ನಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪಕ್ಷ ನೀಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳು ಸಹ ಜಾರಿಗೆ ಬರಲಿವೆ. ಜನರ ಆಶಯಗಳಿಗೆ ತಕ್ಕಂತೆ ರಾಜ್ಯ ಸರ್ಕಾರ ಸ್ಪಂದಿಸಲಿದೆ, ಯಾವುದೇ ಅಪಪ್ರಚಾರಗಳಿಗೆ ಜನತೆ ಕಿವಿಗೊಡಬಾರದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ(BJP)ಗೆ ತಕ್ಕ ಉತ್ತರ ನೀಡಬೇಕು ಎಂದರು.

ಕಾಂಗ್ರೆಸ್‌  ಪಕ್ಷದಿಂದ ಚುನಾವಣೆಗೆ ಮುನ್ನ ನೀಡಲಾಗಿದ್ದ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಶೀಘ್ರವೇ ಅನುಷ್ಠಾನಗೊಳಿಸಲಿದೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಎಸ್ ರಾಮಪ್ಪ ಹೇಳಿದರು.

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ಪ್ರಕಟಿಸಿದ್ದು ಶೀಘ್ರ ಅನುಷ್ಠಾನಗೊಳ್ಳಲಿವೆ. ಅದರಂತೆ ರಾಜ್ಯದ ಜನರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆಯಿಟ್ಟು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಂಪುಟದ ಸದಸ್ಯರುಗಳು ಅಧಿಕಾರ ಪ್ರತಿಜ್ಞಾವಿಧಿ ಸ್ವೀಕರಿಸಿದ ಮೊದಲ ಸಂಪುಟ ಸಭೆಯಲ್ಲಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಕ್ರಮ ತೆಗೆದುಕೊಂಡಿದ್ದು, ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ರೂಪುರೇಷೆಗಳನ್ನು ಬಿಡುವಿಲ್ಲದೇ ತಯಾರು ಮಾಡುತ್ತಿದ್ದಾರೆ, ಆದರೆ ಸೋಲಿನ ಹತಾಶೆಯಲ್ಲಿರುವ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷ ನುಡಿದಂತೆ ಈ ಹಿಂದೆಯೂ ನಡೆದಿದೆ. ಈಗಲೂ ಸಹ ನುಡಿದಂತೆ ನಡೆಯಲಿದೆ, ಸರ್ಕಾರ ರಚನೆಯಾಗಿ 15 ದಿನದಲ್ಲೇ ಈ ರೀತಿಯ ಟೀಕೆ ಮಾಡುವುದು ತರವಲ್ಲ. ಸೋಲಿನ ಹತಾಷೆಯಿಂದ ಕೆಲವು ಪ್ರತಿಪಕ್ಷದ ನಾಯಕರುಗಳು ಕೆಲವೆಡೆ ಜನರನ್ನು ಸರ್ಕಾರದ ವಿರುದ್ಧ ಎತ್ತಿಗಟ್ಟುವ ಕೆಲಸವನ್ನು ಸಹ ಮಾಡುತ್ತಿದ್ದಾರೆ.  ಎಂದು ಹರಿಹಾಯ್ದರು.

ಗೋಷ್ಠಿಯಲ್ಲಿ, ಬಿ. ರೇವಣಸಿದ್ದಪ್ಪ, ಮುರುಗೇಶಪ್ಪ, ಎಂ. ನಾಗೇಂದ್ರಪ್ಪ, ಜಿ. ಕೃಷ್ಣಮೂರ್ತಿ, ಶಶಿ ರೆಡ್ಡಿ, ರೆಹಮಾನ್ ಖಾನ್, ಪ್ರಸನ್ನ ಬೆಳಕೆರೆ, ಗಣೇಶ್ ಮೆಹರ್ವಾಡೆ, ಅಬು ಸಲೇಹಾ ಮತ್ತಿತರರು ಹಾಜರಿದ್ದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment