SUDDIKSHANA KANNADA NEWS/ DAVANAGERE/ DATE-11-06-2025
ಗೌರಿಬಿದನೂರು: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬುದು ಸುಳ್ಳು. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಲ ಜೀವನ್ ಯೋಜನೆಯಡಿ ರಾಜ್ಯ ಸರ್ಕಾರ 50% ಅನುದಾನ ನೀಡಿದ್ದಾರೆ 30% ಮಾತ್ರ ಕೇಂದ್ರ ಸರ್ಕಾರ ನೀಡುತ್ತದೆ. 20% ಫಲಾನುಭವಿಗಳು ನೀಡುತ್ತಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿಗಳ ಹೆಸರಿರುತ್ತದೆ. ಕುಸುಮ್ ಬಿ ಯೋಜನೆಯಡಿ 30% ಕೇಂದ್ರದಿಂದ ಬರುತ್ತದೆ. ಒಪ್ಪದೇ ಹೋದರೆ ಅದೂ ಬರುವುದಿಲ್ಲ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.
ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ:
ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು.
ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.