SUDDIKSHANA KANNADA NEWS/ DAVANAGERE/ DATE:19-01-2025
ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನು ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ನೇತೃತ್ವದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು.
ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಮೊಹಮ್ಮದ್ ಜಿಕ್ರಿಯಾ ಅವರು ಶಾಮನೂರು ಶಿವಶಂಕರಪ್ಪರ ಆಶೀರ್ವಾದ ಪಡೆದರು. ಈ ವೇಳೆ ಶಾಸಕರ ಜೊತೆ ಸಮಾಲೋಚನೆ ನಡೆಸಿದರು.
ಈ ವೇಳೆ ಜಿಲ್ಲಾ ಜವಾಹರ್ ಬಾಲ್ ಮಂಚ್ ನಿಂದ ಹೊರ ತಂದ ಹೊಸ ವರ್ಷದ ಕ್ಯಾಲೆಂಡರ್ ಅನ್ನು ಶಾಮನೂರು ಶಿವಶಂಕರಪ್ಪ ಅವರಿಗೆ ತೋರಿಸಿದರು. ಇದನ್ನು ನೋಡಿ ಖುಷಿಪಟ್ಟ ಶಾಮನೂರು ಶಿವಶಂಕರಪ್ಪರು ಇನ್ನೂ ಉತ್ತಮ
ಕಾರ್ಯ ಮಾಡಿ ಎಂದು ಹಾರೈಸಿದರು.
ಪದಾಧಿಕಾರಿಗಳಾದ ಮಂಜುಸ್ವಾಮಿ, ಫಯಾಜ್ ಅಹ್ಮದ್, ರಮೇಶ್ ಮತ್ತಿತರರು ಹಾಜರಿದ್ದರು.