SUDDIKSHANA KANNADA NEWS/ DAVANAGERE/ DATE:14-01-2025
ತೆಲಂಗಾಣ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ದೇವಸ್ಥಾನದ ಬಳಿ ದಂಪತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಜನವರಿ 14 ರಂದು ತೆಲಂಗಾಣದ ಪುಪ್ಪಲಗುಡದ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಬಳಿಯ ಬೆಟ್ಟದ ಮೇಲೆ ದಂಪತಿಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನಿಖಾಧಿಕಾರಿಗಳು ಅಪರಾಧದ ಸ್ಥಳವನ್ನು ಪರಿಶೀಲಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಮೊದಲು ಮಹಿಳೆ ಕೊಂದು ಆ ನಂತರ ಆಕೆಯ ಪತಿಯನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆಯ.
ದೊಡ್ಡ ಕಲ್ಲುಗಳಿಂದ ಹೊಡೆದು ಸಾಯಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದ್ದು, ಗಾಳಿಪಟ ಹಾರಿಸಲು ಬೆಟ್ಟಕ್ಕೆ ತೆರಳಿದ್ದ ಸ್ಥಳೀಯ ಯುವಕರು ಮೃತದೇಹಗಳನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ರಾಜೇಂದ್ರನಗರ ಡಿಸಿಪಿ ಸಿ.ಎಚ್.ಶ್ರೀನಿವಾಸ್ ಮತ್ತು ತನಿಖಾಧಿಕಾರಿಗಳು ಆಗಮಿಸಿದ್ದಾರೆ. ವಿಧಿವಿಜ್ಞಾನ ತಂಡಗಳು ಮತ್ತು ಶ್ವಾನದಳವನ್ನು ನಿಯೋಜಿಸಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಜನವರಿ 13-14 ರ ರಾತ್ರಿಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ವಿವಿಧ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.