ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಈ ತರ ಮಟನ್ ಪೆಪ್ಪರ್ ಫ್ರೈ ಮಾಡಿ ತಿಂದರೆ ಯಾವತ್ತೂ ಮರೆಯೋಲ್ಲ

On: May 12, 2024 9:13 AM
Follow Us:
---Advertisement---

ಬೇಕಾಗುವ ಪದಾರ್ಥಗಳು…

ಮಟನ್- ಒಂದು ಕೇಜಿ (ಚಿಕ್ಕ ತುಂಡುಗಳಾಗಿಸಿದ್ದು)

ಅಚ್ಚ ಖಾರದ ಮೆಣಸಿನಪುಡಿ- ಒಂದು ದೊಡ್ಡ ಚಮಚ (ಕಾಶ್ಮೀರಿ ಚಿಲ್ಲಿ ಆದರೆ ಒಂದೂವರೆ ಚಮಚ)

ಗರಂ ಮಸಾಲಾ ಪುಡಿ-ಒಂದು ದೊಡ್ಡ ಚಮಚ

ಕರಿಬೇವಿನ ಎಲೆಗಳು- ಸ್ವಲ್ಪ

ಅರಿಶಿನ ಪುಡಿ- ಸ್ವಲ್ಪ

ಹಸಿಮೆಣಸಿನ ಕಾಯಿ-ನಾಲ್ಕು (ಉದ್ದಕ್ಕೆ ಸೀಳಿದ್ದು)

ಕಾಳುಮೆಣಸಿನ ಪುಡಿ- ಮೂರು ದೊಡ್ಡಚಮಚ

ದನಿಯಾ ಪುಡಿ: ಒಂದು ದೊಡ್ಡ ಚಮಚ

ಶುಂಠಿ-ಬೆಳ್ಳುಳ್ಳಿ ಪೇಸ್ಟ್: ಅರ್ಧ ದೊಡ್ಡ ಚಮಚ

ಎಣ್ಣೆ – ಸ್ವಲ್ಪ

ಉಪ್ಪು: ರುಚಿಗೆ ತಕ್ಕಷ್ಟು

ಮಾಡುವ ವಿಧಾನ…

ಮಾಂಸದ ತುಂಡುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ನೀರೆಲ್ಲಾ ಹೊರಹೋಗುವಂತೆ ಬಸಿಯಿರಿ. ಇದಕ್ಕೆ ಅರಿಶಿನದ ಪುಡಿ ಹಚ್ಚಿ ಬದಿಗಿಡಿ.

ಸುಮಾರು ಹದಿನೈದು ನಿಮಿಷದ ಬಳಿಕ ಪ್ರೆಶರ್ ಕುಕ್ಕರ್ ನಲ್ಲಿ ಕೊಂಚ ಎಣ್ಣೆ ಹಾಕಿ ಬಿಸಿಮಾಡಿ. ಬಿಸಿಯಾದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರಿಶಿನ ಪುಡಿ, ದನಿಯಾ ಪುಡಿ, ಖಾರದ ಪುಡಿ, ಉಪ್ಪು ಹಾಕಿ ಚಿಕ್ಕ ಉರಿಯಲ್ಲಿ ತಿರುವುತ್ತಾ ಹುರಿಯಿರಿ.

ಕೊಂಚ ಕಂದು ಬಣ್ಣಕ್ಕೆ ತಿರುಗಿದ ಬಳಿಕ ಮಾಂಸದ ತುಂಡುಗಳನ್ನು ಹಾಕಿ ಕೆಲಕಾಲ ಹುರಿದು ಬಳಿಕ ಮುಚ್ಚಳ ಮುಚ್ಚಿ ಅತಿ ಕಡಿಮೆ ಉರಿಯಲ್ಲಿ ಸುಮಾರು ಹದಿನೈದು ನಿಮಿಷ ಬೇಯಲು ಬಿಡಿ.

ಇನ್ನೊಂದು ಪಾತ್ರೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ ಕರಿಬೇವಿನ ಎಲೆ, ಹಸಿಮೆಣಸಿನಕಾಯಿ ಹಾಕಿ ಕಂದು ಬಣ್ಣವಾಗುವವರೆಗೆ ಹುರಿಯಿರಿ.

ಬಳಿಕ ಗರಂ ಮಸಾಲ ಪುಡಿ, ಕಾಳುಮೆಣಸಿನ ಪುಡಿ ಹಾಕಿ ಹುರಿಯಿರಿ. ನಂತರ ಪ್ರೆಶರ್ ಕುಕ್ಕರಿನಲ್ಲಿ ಬೇಯಿಸಿದ್ದ ಮಾಂಸದ ತುಂಡುಗಳನ್ನು ಇದಕ್ಕೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.

ಚಿಕ್ಕ ಉರಿಯಲ್ಲಿಯೇ ನಡು ನಡುವೆ ತಿರುವುತ್ತಾ ಮಾಂಸ ಬೇಯಲು ಬಿಡಿ. ಹತ್ತು ನಿಮಿಷದ ಬಳಿಕ ಉರಿಯನ್ನು ನಂದಿಸಿ. ಇದೀಗ ಕೊತ್ತಂಬರಿ ಸೊಪ್ಪಿನೊಂದಿಗೆ ಅಲಂಕರಿಸಿದರೆ ರುಚಿಕರವಾದ ಮಟನ್ ಪೆಪ್ಪರ್ ಫ್ರೈ ಸವಿಯಲು ಸಿದ್ಧ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Credit card

ಬಾಡಿಗೆ ಪಾವತಿಗೆ ಕ್ರೆಡಿಟ್ ಕಾರ್ಡ್ ಬಳಕೆ ಸರಿಯೋ ತಪ್ಪೇ: ಈ ಐದು ಅಂಶಗಳ ನೆನಪಿನಲ್ಲಿಟ್ಟುಕೊಳ್ಳಿ!

bank of baroda

ಬ್ಯಾಂಕ್ ಆಫ್ ಬರೋಡಾ ಸ್ಥಳೀಯ ಬ್ಯಾಂಕ್ ಅಧಿಕಾರಿ ನೇಮಕಾತಿ 2025: 2500 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಅಡಿಕೆ

ಮಳೆ ಆಶ್ರಿತ ಪ್ರದೇಶದಲ್ಲಿ ಕೊಳವಿ ಬಾವಿ ನೀರಿನೊಂದಿಗೆ ಅಡಿಕೆ ಬೆಳೆಯುವುದರಿಂದ ಅಂತರ್ಜಲ ಮಟ್ಟ ಕುಸಿತ!

ಕಿರಣ್ ರಿಜಿಜು

ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಚರ್ಚೆಗೆ ಕೇಂದ್ರ ಸಿದ್ಧ, ಹಿಂಜರಿಯುವುದಿಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು

ಕೂಡಲ ಸಂಗಮ

ಭುಗಿಲೆದ್ದ ಕೂಡಲ ಸಂಗಮ ಪೀಠ ವಿವಾದದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ಹೆಚ್. ಎಸ್. ಶಿವಶಂಕರ್!

ದಾವಣಗೆರೆ

ಅಕ್ರಮ, ಹಗರಣಗಳ ತಾಣ ದಾವಣಗೆರೆ ನಿರ್ಮಿತಿ ಕೇಂದ್ರದ ಅಕ್ರಮ ನೇಮಕಾತಿಯಾಗಿರುವ 12 ಮಂದಿ ವಜಾಗೊಳಿಸದಿದ್ದರೆ ಕೋರ್ಟ್ ಗೆ: ಲೋಕಿಕೆರೆ ನಾಗರಾಜ್ ಎಚ್ಚರಿಕೆ!

Leave a Comment