Home ದಾವಣಗೆರೆ ಮೈಸೂರು ಸ್ಯಾಂಡಲ್ ಸೋಪ್ ಗೆ ತಮನ್ನಾ ರಾಯಭಾರಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ?
ದಾವಣಗೆರೆನವದೆಹಲಿಬೆಂಗಳೂರುಸಿನಿಮಾ

ಮೈಸೂರು ಸ್ಯಾಂಡಲ್ ಸೋಪ್ ಗೆ ತಮನ್ನಾ ರಾಯಭಾರಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ?

Share
ಮೈಸೂರು
Share

ಬೆಂಗಳೂರು: ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ಕನ್ನಡ ನಟಿಯರ ನಿರ್ಲಕ್ಷ್ಯಕ್ಕೆ ಆಕ್ರೋಶ ಭುಗಿಲೇಳುವಂತೆ ಮಾಡಿದೆ.

ಕನ್ನಡ ಚಿತ್ರರಂಗ ಮಾತ್ರವಲ್ಲ, ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಖ್ಯಾತ ನಟಿಯರಿದ್ದರೂ ಪರಭಾಷೆ ನಟಿಯ ಮೇಲೆ ಯಾಕೆ ಮೋಹ ಎಂದು ಪ್ರಶ್ನಿಸತೊಡಗಿದ್ದಾರೆ.

ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ.ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ. ಆದರೂ ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ವಿವಾದದ ಮುಖ್ಯ ಅಂಶಗಳು:

  • ಸ್ಥಳೀಯ ಪ್ರತಿಭೆಗಳ ನಿರ್ಲಕ್ಷ್ಯ: ಕನ್ನಡ ಚಿತ್ರರಂಗದಲ್ಲಿ ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅನೇಕ ನಟಿಯರಿದ್ದಾರೆ (ಉದಾಹರಣೆಗೆ ಸಪ್ತಮಿ ಗೌಡ, ರುಕ್ಮಿಣಿ ವಸಂತ್, ಶ್ರೀನಿಧಿ ಶೆಟ್ಟಿ). ಇವರನ್ನು ಬಿಟ್ಟು ಪರಭಾಷೆಯ ನಟಿಯನ್ನು ಆಯ್ಕೆ ಮಾಡಿದ್ದು ಸರಿಯಲ್ಲ ಎಂಬುದು ಅನೇಕರ ವಾದ.

  • ಅಸ್ಮಿತೆಯ ಪ್ರಶ್ನೆ: ಮೈಸೂರು ಸ್ಯಾಂಡಲ್ ಸೋಪ್ ಕೇವಲ ಒಂದು ಉತ್ಪನ್ನವಲ್ಲ, ಅದು ಕರ್ನಾಟಕದ ಪರಂಪರೆ ಮತ್ತು ಹೆಮ್ಮೆ. ಇಂತಹ ಐತಿಹಾಸಿಕ ಬ್ರ್ಯಾಂಡ್‌ಗೆ ಕನ್ನಡಿಗರೇ ಮುಖವಾಗಿದ್ದರೆ ಚೆನ್ನಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

  • ರಾಜಕೀಯ ಟೀಕೆ: ಪ್ರತಿಪಕ್ಷಗಳು ಈ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು “ಕನ್ನಡ ವಿರೋಧಿ” ಎಂದು ಟೀಕಿಸುತ್ತಿವೆ.

ಕೆಎಸ್‌ಡಿಎಲ್ (KSDL) ಸಮರ್ಥನೆ:

ಸಾಮಾನ್ಯವಾಗಿ ಇಂತಹ ನಿರ್ಧಾರಗಳ ಹಿಂದೆ ಸಂಸ್ಥೆಯು ಕೆಲವು ವಾಣಿಜ್ಯ ಉದ್ದೇಶಗಳನ್ನು ಹೊಂದಿರುತ್ತದೆ:

  • ಜಾಗತಿಕ ಮಾರುಕಟ್ಟೆ: ತಮನ್ನಾ ಅವರಂತಹ ನಟಿಯರಿಗೆ ದಕ್ಷಿಣ ಭಾರತದ ಜೊತೆಗೆ ಉತ್ತರ ಭಾರತದಲ್ಲೂ ದೊಡ್ಡ ಮಾರುಕಟ್ಟೆ ಇದೆ. ಬ್ರ್ಯಾಂಡ್ ಅನ್ನು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ವಿಸ್ತರಿಸಲು ಈ ಆಯ್ಕೆ ಮಾಡಿರಬಹುದು.

  • ಯುವ ಸಮುದಾಯ: ಹೊಸ ತಲೆಮಾರಿನ ಗ್ರಾಹಕರನ್ನು ಸೆಳೆಯಲು ಸಂಸ್ಥೆಯು ಇಂತಹ “ಗ್ಲಾಮರಸ್” ಆಯ್ಕೆಗಳಿಗೆ ಮೊರೆ ಹೋಗುವ ಸಾಧ್ಯತೆ ಇರುತ್ತದೆ.

ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಪಮಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ.ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಸಂಸದ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *