ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಫೆ.9ಕ್ಕೆ ನಮನ ಅಕಾಡೆಮಿಯ ಪೂರ್ವ ರಂಗನಮನ ಕಾರ್ಯಕ್ರಮ

On: February 7, 2025 7:18 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-02-2025

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಮನ ಅಕಾಡೆಮಿ ಸಹಯೋಗದಲ್ಲಿ ಫೆ. 9 ರಂದು ದಾವಣಗೆರೆಯ ಬಾಪೂಜಿ ಸಭಾಂಗಣದಲ್ಲಿ ಪೂರ್ವ ರಂಗನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಮನ ಅಕಾಡೆಮಿ ಉಪಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಸಂಜೆ 6ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಾಟ್ಯ ನಿನಾದ ಅಕಾಡೆಮಿ ನಿರ್ದೇಶಕ ಧರಣಿ ಟಿ. ಕಶ್ಯಪ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಟಿ. ಗಾಯಿತ್ರಿ, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ ಇತರರು ಭಾಗವಹಿಸುವರು. ಡಾ.ಎ.ಎಂ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ದಾವಣಗೆರೆಯ ಮಕ್ಕಳಿಗೆ ನೃತ್ಯ, ಸಂಗೀತ ಇತರೆ ಸಾಂಸ್ಕೃತಿಕ ಕಲೆಗಳ ಪರಿಚಯಿಸುವ ಜೊತೆಗೆ ಕಲಿಸಿಕೊಡುವ ನಿಟ್ಟಿನಲ್ಲಿ ನಮನ ಅಕಾಡೆಮಿ ಕಾರ್ಯ ನಿರ್ವಹಿಸುತ್ತದೆ ಎಂದರು.

ಅಕಾಡೆಮಿ ಕಾರ್ಯದರ್ಶಿ ಮಾಧವಿ ಡಿ. ಕೆ. ಮಾತನಾಡಿ, ಪೂರ್ವ ರಂಗನಮನ ವಿಶೇಷ ಕಾರ್ಯಕ್ರಮ. ಶಾಸ್ತ್ರೀಯ ನೃತ್ಯ ದ ಮುನ್ನವೇ ಮಕ್ಕಳು ಗೆಜ್ಜೆಪೂಜೆ ಕಟ್ಟಿಕೊಂಡು ರಂಗಪ್ರವೇಶ ಮಾಡುವರು. ಶನಿವಾರ ಬೆಳಗ್ಗೆ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಗೆಜ್ಜೆ ನೀಡಲಾಗುವುದು. ಮೊದಲ ಬಾರಿಗೆ ಶಾಸ್ತ್ರೋಕ್ತವಾಗಿ ನೃತ್ಯ ಕ್ಷೇತ್ರದಲ್ಲಿ ಪ್ರವೇಶಿಸುವ ಮುನ್ನ ನಡೆಯುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ವಿವಿಧ ಶಾಸ್ತ್ರೀಯ ನೃತ್ಯಗಳು ಮತ್ತು ನೃತ್ಯ ರೂಪಕ ಶ್ರೀ ಕೃಷ್ಣ ವಿಲಾಸಂ(ಕೃಷ್ಣನ ಲೀಲೆಗಳು) ಹಾಗೂ ಋತು ಹಿರೇಮಠ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ನಮನ ಅಕಾಡೆಮಿ ಅಧ್ಯಕ್ಷ ಕೆ.ಎನ್. ಗೋಪಾಲ ಕೃಷ್ಣ, ಮಂಜುಳಾ, ಟಿ. ಯುವರಾಜ್ ಇದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment