ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಂದಿನಿ ಹಾಲು ಲೀಟರ್ ಗೆ 5 ರೂ. ಏರಿಕೆ…? ಸಿಎಂ ಅಂಗಳದಲ್ಲಿ ಬೆಲೆಯೇರಿಕೆ ಚೆಂಡು!

On: February 19, 2025 11:52 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-02-2025

ಬೆಂಗಳೂರು: 2025ರ ವರ್ಷ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಲಾರಂಭಿಸಿದೆ. ಬಸ್ ದರ ಏರಿಕೆಯಾಯ್ತು. ಮೆಟ್ರೋ ದರ ಹೆಚ್ಚಳವಾಯ್ತು. ವಿದ್ಯುತ್ ದರ ತುಟ್ಟಿಯಾಯ್ತು. ಈಗ ಹಾಲಿನ ದರ ಹೆಚ್ಚಳ ಆಗಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ.

ಹೌದು. ಆದಷ್ಟು ಬೇಗ ನಂದಿನಿ ಹಾಲಿನ ದರ ಪರಿಷ್ಕರಣೆ ಆಗಲಿದೆ ಎಂದು ತಿಳಿದು ಬಂದಿದೆ. ಪ್ರತಿ ಲೀಟರ್ ನಂದಿನಿ ಹಾಲಿಗೆ ಐದು ರೂಪಾಯಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಲೆ ಏರಿಕೆ ಚೆಂಡು ಈಗಾಗಲೇ
ಸಿಎಂ ಸಿದ್ದರಾಮಯ್ಯರ ಅಂಗಳ ತಲುಪಿದೆ. ಗ್ರೀನ್ ಸಿಗ್ನಲ್ ಕೊಟ್ಟರೆಂದರೆ ಲೀಟರ್ ಗೆ ಐದು ರೂಪಾಯಿ ಹೆಚ್ಚಳ ಗ್ಯಾರಂಟಿ.

ಈ ಹೊಸ ವರ್ಷ ಆರಂಭವಾಗಿದ್ದೇ ತಡ, ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್‌ ನೀಡುತ್ತಿದೆ. ಇತ್ತೀಚೆಗಷ್ಟೇ ಬಸ್‌, ಮೆಟ್ರೋ ದರ ಏರಿಕೆಯಿಂದಾಗಿ ಜನ ಈಗಾಗಲೇ ಕಂಗಾಲಾಗಿ ಹೋಗಿದ್ದಾರೆ. ಅದರಲ್ಲೂ ಮೆಟ್ರೋ ದರ ಏರಿಕೆ ಮಾತ್ರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಗ್ಗೆ ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗುತ್ತಿದೆ. ಇದೀಗ ಬಸ್‌, ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಯ ಬಗ್ಗೆ ಚರ್ಚೆ ನಡೆಯುತ್ತಿದೆ.

ಕೆಲ ದಿನಗಳ ಹಿಂದಷ್ಟೇ ರೈತರಿಗೆ ನೀಡುವ ಹಾಲಿನ ದರ ಏರಿಸುವಂತೆ ಕೆಎಂಎಫ್ ಮುಂದೆ ರೈತರು ಪ್ರತಿಭಟನೆ ಮಾಡಿದ್ದರು. ಜತೆಗೆ ಹಾಲು ಒಕ್ಕೂಟಗಳಿಂದ ನಂದಿನಿ ಹಾಲಿನ ದರ ಏರಿಸುವಂತೆ ಕೆಎಂಎಫ್ ಗೆ ಒತ್ತಡ ಹೇರಲಾಗಿತ್ತು. ಈ ಎಲ್ಲವುಗಳನ್ನು ಪರಿಗಣಿಸಿ ಇದೀಗ ಕೆಎಂಎಫ್ ಆಡಳಿತ ಮಂಡಳಿ ಸರ್ಕಾರಕ್ಕೆ ಮನವಿ ಮಾಡಿದೆ.ಇನ್ನು ಕೆಎಂಎಫ್‌ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ ಎನ್ನಲಾಗಿದ್ದು, ಸದ್ಯ ಸಿಎಂ ಅಂಗಳದಲ್ಲಿ ನಂದಿನಿ ಹಾಲಿನ ದರದ ಮನವಿ ತಲುಪಿದೆ. ಮುಖ್ಯಮಂತ್ರಿಗಳ ಅನುಮತಿಗಾಗಿ ಕೆಎಂಎಫ್ ಆಡಳಿತ ಮಂಡಳಿ ಕಾದು ಕುಳಿತಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment