ದಾವಣಗೆರೆ: ನೀಟ್ – ಯುಜಿ ಪರೀಕ್ಷೆ ರದ್ದುಗೊಳಿಸುವ ಮೂಲಕ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೇಂದ್ರ ಸರ್ಕಾರವು ಕಲ್ಲು ಹಾಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆಯನ್ನು ರದ್ದುಗೊಳಿಸಿದೆ. ನೀಟ್ – ಯುಜಿ
ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಎಚ್ಚರ ವಹಿಸದೇ ಇರುವುದು ದುರಂತದ ಸಂಗತಿ ಎಂದು ಹೇಳಿದ್ದಾರೆ.
ಸುಮಾರು 23 ಲಕ್ಷದಷ್ಟು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರೀಕ್ಷೆ ರದ್ದುಗೊಳಿಸಿರುವುದು ಆತಂಕ ತರುವ ಜೊತೆಗೆ ದುಗುಡವನ್ನು ಹೆಚ್ಚಿಸಿದೆ. ಪರೀಕ್ಷೆ ತೆಗೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿಯೂ ಹಾಗೂ
ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ ರಾಷ್ಟ್ರೀಯ ಅರ್ಹತ್ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿರುವುದರಿಂದ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಸೀಟು ಹಂಚಿಕೆಯೂ ವಿಳಂಬವಾಗುವ ಸಾಧ್ಯತೆ ಇದ್ದು,
ವಿದ್ಯಾರ್ಥಿಗಳ ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರವು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದಾರೆ. ಇದು ಕೇಂದ್ರ ಸರ್ಕಾರದ ನಿರ್ಲಕ್ಷ್ಯದ, ಬೇಜವಾಬ್ದಾರಿಯ
ಪರಮಾವಧಿ ಎಂದು ಆರೋಪಿಸಿದ್ದಾರೆ.
ಪರೀಕ್ಷೆಗಾಗಿ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ವಹಿಸಿದ್ದರು. ಕನಸು ಕಟ್ಟಿಕೊಂಡು ಪರೀಕ್ಷೆ ಬರೆದಿದ್ದರು. ಆದರೆ ದೇಶಾದ್ಯಂತ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ವಿದ್ಯಾರ್ಥಿ ಸಮೂಹ ಹಾಗೂ ಪೋಷಕರು ಕ್ಷಮಿಸುವುದಿಲ್ಲ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
- Central Government Criticism.
- DAVANAGERE NEWS
- Karnataka regional news.
- Medical entrance exam scam
- NDA government failure
- NEET UG 2026 news.
- NEET UG 2026 ರದ್ದು.
- NEET UG exam cancelled
- NTA negligence
- Paper leak controversy
- Student future at risk
- Syed Khalid Ahmed
- Youth Congress Protest
- ಎನ್ ಡಿಎ ಸರ್ಕಾರ ಟೀಕೆ
- ಎನ್ಟಿಎ ನಿರ್ಲಕ್ಷ್ಯ
- ಕರ್ನಾಟಕ ಸುದ್ದಿ
- ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ
- ದಾವಣಗೆರೆ ಸುದ್ದಿ
- ನೀಟ್ ಪರೀಕ್ಷೆ ರದ್ದು
- ಪ್ರಶ್ನೆ ಪತ್ರಿಕೆ ಸೋರಿಕೆ
- ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ
- ವೈದ್ಯಕೀಯ ಪ್ರವೇಶ ಪರೀಕ್ಷೆ
- ಸೈಯದ್ ಖಾಲಿದ್ ಅಹ್ಮದ್





Leave a comment