ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನೇಪಾಳ: ಕಟ್ಮಂಡುವಿನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ- 63 ಮಂದಿ ನಾಪತ್ತೆ

On: July 12, 2024 10:12 AM
Follow Us:
---Advertisement---

ಕಠ್ಮಂಡು: ಭೂಕುಸಿತ ಸಂಭವಿಸಿ 63 ಮಂದಿ ನಾಪತ್ತೆಯಾಗಿರುವ ಘಟನೆ ನೇಪಾಳದ ತ್ರಿಶೂಲಿ ನದಿ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ನದಿಯ ನೀರಿನಲ್ಲಿ ಎರಡು ಬಸ್ ಗಳು ಕೊಚ್ಚಿ ಹೋಗಿದ್ದು, ಈ ಬಸ್ ಗಳಲ್ಲಿ 61ಮಂದಿ ಪ್ರಯಾಣಿಕರಿದ್ದರು. ಹಾಗೂ ಇಬ್ಬರು ಚಾಲಕರು ಸೇರಿದಂತೆ ಬಸ್‌ಗಳಲ್ಲಿ ಇದ್ದ 63 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.

ಇಂದು ಬೆಳಗ್ಗೆ 3.30ರ ಸುಮಾರಿಗೆ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಬಸ್ ನಲ್ಲಿದ್ದವರೆಲ್ಲರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ನೇಪಾಳದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಈಗಾಗಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಈ ಶೋಧ ಕಾರ್ಯಕ್ಕೆ ಮಳೆ ಅಡ್ಡಿಯುಂಟುಮಾಡಿದೆ ಎಂದು ಮದನ್‌ ನಗರದ ಜಿಲ್ಲಾಧಿಕಾರಿ ಹೇಳಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment