ದಾವಣಗೆರೆ: ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲೂಕಿನ 66/11 ಕೆ.ವಿ. ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
READ ALSO THIS STORY: ಕೃಷಿ ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆ: ಸಾಮಾನ್ಯ ರೈತರಿಗೆ ರೂ. 40 ಲಕ್ಷ, ಸಂಘ ಸಂಸ್ಥೆಗಳಿಗ ರೂ. 50 ಲಕ್ಷ ಸಹಾಯಧನ
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.