ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಪವನ ಶಕ್ತಿಗೆ ದಾರಿ” ಎಂಬ ಶೀರ್ಷಿಕೆಯಡಿ ಒನ್ ಡೇ ಟ್ರೈನಿಂಗ್!

On: March 4, 2025 9:38 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-03-2025

ದಾವಣಗೆರೆ: ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ರೊಬೊಟಿಕ್ಸ್ ಮತ್ತು ಆಟೊಮೇಷನ್ ವಿಭಾಗದ ವತಿಯಿಂದ ಜಿಎಂ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (ಸಿಐಜಿಎಸ್‌ಆರ್‌ಡಿ) ಸಹಯೋಗದಲ್ಲಿ “ಪವನ ಶಕ್ತಿಗೆ ದಾರಿ” ಎಂಬ ಶೀರ್ಷಿಕೆಯಲ್ಲಿ ಪವನ ವಿದ್ಯುತ್ ಉತ್ಪಾದನೆಯ ವಿಷಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಸೆಮಿನಾರ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾದ ಸುಜ್ಲಾನ್ ಗ್ಲೋಬಲ್ ಸರ್ವಿಸ್ ಲಿಮಿಟೆಡ್ ನ ಓಎಂಎಸ್ ಕರ್ನಾಟಕ ರಾಜ್ಯ ಮುಖ್ಯಸ್ಥರಾದ ಜನರ್ ಕೆ.ಎಸ್, ಕರ್ನಾಟಕ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪ್ರಾದೇಶಿಕ ಪ್ರತಿಭಾ ಸ್ವಾಧೀನ ಮುಖ್ಯಸ್ಥರಾದ ಅರಿಜೀತ್ ಬರ್ಧನ್, ಕರ್ನಾಟಕ ಜ್ಞಾನ ಕೇಂದ್ರದ ಉಸ್ತುವಾರಿಗಳಾದ ಡಿಜೆಆರ್ ಪ್ರಸಾದ್, ಎಲೆಕ್ಟ್ರಿಕಲ್‌ ತಂತ್ರಜ್ಞಾನ ಉಸ್ತುವಾರಿಗಳಾದ ಕೇಶವ ಮೂರ್ತಿ, ಎಲ್ ಅಂಡ್ ಡಿ ಎಲೆಕ್ಟ್ರಿಕಲ್ ಇಂಚಾರ್ಜ್ ನೇತಾಜಿ ಕೆ. ಇವರುಗಳು ಪವನ ವಿದ್ಯುತ್ ಉತ್ಪಾದನೆಯ ಮೂಲಭೂತ ಅಂಶಗಳು ಮತ್ತು ಉದ್ಯಮದಲ್ಲಿನ ಇತ್ತೀಚಿನ ಪ್ರವೃತ್ತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿವರಣೆ ನೀಡಿದರು.

ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂ.ಬಿ ಅವರು, ಈ ವಿಷಯದ ಬಗ್ಗೆ ನೀಡುತ್ತಿರುವ ತರಬೇತಿಯ ಸದಪಯೋಗಪಡಿಸಿಕೊಂಡು ಜ್ಞಾನ ವೃದ್ಧಿಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶುಭ
ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಎಂ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ನಿರ್ದೇಶಕರು, ರೊಬೊಟಿಕ್ಸ್ ಮತ್ತು ಆಟೊಮೇಷನ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜಕುಮಾರ್ ಡಿ.ಜಿ, ಕಾರ್ಯಕ್ರಮದ ಸಂಚಾಲಕರಾದ ಡಾ.
ಯು.ಎಂ. ನೇತ್ರಾವತಿ, ಸಂಯೋಜಕರಾದ ಅನಿಲ್ ಕುಮಾರ್ ಟಿಆರ್ ಬಿ ಸೇರಿದಂತೆ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ರೊಬೊಟಿಕ್ಸ್ ಮತ್ತು ಆಟೊಮೇಷನ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment