ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

90 ವರ್ಷದ ತಾತನಿಗೆ ಹೊಸ ಜೀವ: ರೋಬೋಟಿಕ್ ಶಸ್ತ್ರಚಿಕಿತ್ಸೆ ತಂದ ಹೊಸ ಆಶಾಕಿರಣ

On: October 15, 2025 12:21 PM
Follow Us:
ಶಸ್ತ್ರಚಿಕಿತ್ಸೆ
---Advertisement---

SUDDIKSHANA KANNADA NEWS/DAVANAGERE/DATE:15_10_2025

ಬೆಂಗಳೂರು, ವೈಟ್‌ ಫಿಲ್ದ್‌ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.

ಈ ಸುದ್ದಿಯನ್ನೂ ಓದಿ: ಅಮೆರಿಕಕ್ಕೆ ಎರಡು ತಿಂಗಳ ನಂತರ ಅಂಚೆ ಸೇವೆ ಪುನರಾರಂಭಿಸಿದ ಭಾರತ: ಏನೆಲ್ಲಾ ಬದಲಾವಣೆಗಳಿವೆ?
ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್‌ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.

ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು.

“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.

ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ. ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿವಿ ಷಣ್ಮುಗಂ

“ಫ್ರೀ ವೈಫ್” ನೀಡ್ತಾರೆಂಬ ಸಿವಿ ಷಣ್ಮುಗಂ ಹೇಳಿಕೆಗೆ ಮಹಿಳಾ ನಾಯಕಿಯರು ಕೆಂಡಾಮಂಡಲ!

ದಾವಣಗೆರೆ

ದಾವಣಗೆರೆಯ ವಿಶ್ವಬಂಧು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಮರಳುಸಿದ್ದಯ್ಯ ವಿಧಿವಶ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

Leave a Comment