• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Tuesday, May 13, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಎಸ್ ಬಿ ಐ ಬ್ಯಾಂಕ್ ಶಾಖಾಧಿಕಾರಿ ಸಂಬಳದಿಂದ ರೂ.88,344 ಪರಿಹಾರಕ್ಕೆ ಆದೇಶ: ಯಾಕೆ… ಏನಿದು ಪ್ರಕರಣ…?

Editor by Editor
October 30, 2024
in ದಾವಣಗೆರೆ
0
ಎಸ್ ಬಿ ಐ ಬ್ಯಾಂಕ್ ಶಾಖಾಧಿಕಾರಿ ಸಂಬಳದಿಂದ ರೂ.88,344 ಪರಿಹಾರಕ್ಕೆ ಆದೇಶ: ಯಾಕೆ… ಏನಿದು ಪ್ರಕರಣ…?

SUDDIKSHANA KANNADA NEWS/ DAVANAGERE/ DATE:30-10-2024

ದಾವಣಗೆರೆ: ದಾವಣಗೆರೆ ನಗರದ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕಿನಿಂದ ಗೃಹಸಾಲ ಪಡೆದಿದ್ದು ನಿಯಮಬಾಹಿರವಾಗಿ ಸಾಲದ ಭದ್ರತೆಗಾಗಿ ವಿಮಾ ಪಾಲಿಸಿ ನೀಡಬೇಕೆಂಬ ಅನುಚಿತ ವ್ಯಾಪಾರ ಪದ್ದತಿಯ ವಿರುದ್ದವಾಗಿ ತೀರ್ಪು ನೀಡಿ ನೊಂದ ಗ್ರಾಹಕರಿಗೆ ಒಟ್ಟು ರೂ.88,344 ಗಳನ್ನು ಶಾಖಾಧಿಕಾರಿ ವೇತನದಿಂದ ಪರಿಹಾರ ನೀಡಲು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಹಂತೇಶ ಈರಪ್ಪ ಶಿಗ್ಲಿ ಆದೇಶಿಸಿದ್ದಾರೆ.

ನಗರದ ಮಂಡಿಪೇಟೆ ಎಸ್‍ಬಿಐ ಶಾಖೆಯಲ್ಲಿ ನ್ಯಾಯಾಂಗ ಇಲಾಖೆ ನೌಕರ ಚಂದ್ರಶೇಖರ ಇವರು 2023 ರ ಜುಲೈ 3 ರಂದು ಗೃಹ ನಿರ್ಮಾಣಕ್ಕಾಗಿ ರೂ.45,00,000ಗಳ ಗೃಹಸಾಲ ಪಡೆದಿದ್ದರು. 7 ತಿಂಗಳ ನಂತರ ಇವರ ಬ್ಯಾಂಕ್ ಖಾತೆಯಿಂದ
ರೂ.28,344 ಹಣ ವರ್ಗಾಯಿಸಿರುವುದು ಕಂಡು ಬಂದಿರುತ್ತದೆ. ಬ್ಯಾಂಕ್‍ಗೆ ಭೇಟಿ ನೀಡಿ ವಿಚಾರಿಸಲಾಗಿ ಈಗಾಗಲೇ ಗೃಹಸಾಲ ಪಡೆಯುವಾಗ ರೂ.4,61,279 ರೂ.ಗಳ ವಿಮಾ ಪಾಲಿಸಿಯನ್ನು ಭದ್ರತೆಗಾಗಿ ನೀಡಿದ್ದು ಈಗ ಹೆಚ್ಚಿನ ವಿಮಾ ಪಾಲಿಸಿ ಏಕೆ
ಎಂದು ಪ್ರಶ್ನಿಸಿರುತ್ತಾರೆ. ನೀವು ಒಂದು ಕೋರಿಕೆ ಪತ್ರ ನೀಡಿ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆಂದು ಸಮಾಜಾಯಿಸಿ ನೀಡಿ ಕಳುಹಿಸಿದ್ದರು.

ಅವರು ಕ್ರಮ ತೆಗೆದುಕೊಳ್ಳದಿರುವುದರಿಂದ ಮತ್ತೆ 2023 ರ ಆಗಸ್ಟ್ 16 ರಂದು ಬ್ಯಾಂಕಿನ ಅಧಿಕಾರಿಗಳನ್ನು ಭೇಟಿಯಾಗಿ ವಿಚಾರಿಸಿದರು. ಈ ವೇಳೆ ಶಾಖೆಯ ಮುಖ್ಯ ವ್ಯವಸ್ಥಾಪಕರು ಗ್ರಾಹಕರ ಕೋರಿಕೆಯನ್ನು ತಿರಸ್ಕರಿಸಿ, ಬ್ಯಾಂಕಿನ ನಿಯಮದಂತೆ ಮತ್ತು ಆಡಿಟ್‍ಗೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ನೀಡಿದ ಗೃಹರಕ್ಷಕ ಪಾಲಿಸಿಯನ್ನು ರದ್ದುಗೊಳಿಸಲು ಬರುವುದಿಲ್ಲವೆಂದು ಹಿಂಬರಹ ನೀಡಿ ಕಳುಹಿಸಿದ್ದರು.

ಗೃಹಸಾಲ ಪಡೆದ ಚಂದ್ರಶೇಖರ್ ಅವರು ದಾವಣಗೆರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ಈ ಬಗ್ಗೆ ದೂರು ಸಲ್ಲಿಸಿದ್ದರು. ಗ್ರಾಹಕರ ನ್ಯಾಯಾಲಯವು ತೀರ್ಪಿನಲ್ಲಿ ಈ ನಡಾವಳಿಕೆಯು ಗ್ರಾಹಕರ ಹಕ್ಕುಗಳ ವಿರುದ್ದವಾದ ಚಟುವಟಿಕೆಯಾಗಿದ್ದು ಗೃಹಸಾಲ ನೀಡುವಾಗ ಭದ್ರತೆಗಾಗಿ ಯಾವುದೇ ರೀತಿಯ ಪಾಲಿಸಿಗಳನ್ನು ನೀಡಲೇಬೇಕೆಂಬ ಯಾವುದೇ ಪ್ರಾಧಿಕಾರದ ನಿರ್ದೇಶನವಿಲ್ಲದೇ ಮತ್ತು ಸರ್ಕಾರದ ಆದೇಶವಿಲ್ಲದದಿದ್ದರೂ ಸಾರ್ವಜನಿಕ ಬ್ಯಾಂಕ್‍ಗಳು ಇಂತಹ ಅನುಚಿತ ವ್ಯಾಪಾರ ಪದ್ದತಿಗಳನ್ನು ಅನುಸರಿಸುತ್ತಿರುವುದು ಗ್ರಾಹಕರ ಹಿತರಕ್ಷಣೆಗೆ ಮಾರಕವಾಗಿದೆ ಎಂದು ಅಭಿಪ್ರಾಯಿಸಿ ಬ್ಯಾಂಕ್‍ನವರು ಕೈಗೊಂಡ ಕ್ರಮ ಅಸಿಂಧುವೆಂದು ಪರಿಗಣಿಸಿ ಕಡಿತ ಮಾಡಿದ ರೂ.28344 ಗಳನ್ನು ವಾಪಸ್ ಸಾಲದ ಖಾತೆಗೆ ಜಮಾ ಮಾಡಲು ಮತ್ತು ಮಾನಸಿಕ ವ್ಯಥೆಗೆ ಪರಿಹಾರವಾಗಿ ರೂ.50000 ಗಳನ್ನು, ದೂರು ವೆಚ್ಚವಾಗಿ ರೂ.10000 ಗಳು ಸೇರಿ ಒಟ್ಟು ರೂ. 88,344/- ಗಳನ್ನು ಸಂಬಂಧಪಟ್ಟ ಹಿರಿಯ ಶಾಖಾಧಿಕಾರಿಗಳ ಸಂಬಳದಿಂದ ಕಡಿತ ಮಾಡಿ ಪಾವತಿ ಮಾಡಲು ಆದೇಶಿಸಲಾಗಿದೆ.

ತೀರ್ಪು ವೇಳೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ತ್ಯಾಗರಾಜನ್, ಮಹಿಳಾ ಸದಸ್ಯರಾದ ಗೀತಾ ಉಪಸ್ಥಿತರಿದ್ದರು.

Next Post
ಮಾಜಿ ಸೈನಿಕರಿಗೆ ವಿವಿಧ ಉದ್ಯೋಗಗಳಿಗಾಗಿ ಆನ್‍ಲೈನ್ ಮೂಲಕ ತರಬೇತಿ

ಮಾಜಿ ಸೈನಿಕರಿಗೆ ವಿವಿಧ ಉದ್ಯೋಗಗಳಿಗಾಗಿ ಆನ್‍ಲೈನ್ ಮೂಲಕ ತರಬೇತಿ

Leave a Reply Cancel reply

Your email address will not be published. Required fields are marked *

Recent Posts

  • ತಮಿಳುನಾಡಿನ 2019ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಕೇಸ್: 9 ಆರೋಪಿಗಳು ದೋಷಿಗಳು!
  • ಬಯೋಮೆಡಿಕಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸ್ನೇಹಿತ ಸೇರಿ ಇಬ್ಬರ ಬಂಧನ!
  • ನಕಲಿ ಮದ್ಯ ಸೇವಿಸಿ 14 ಮಂದಿ ಸಾವು, 6 ಮಂದಿ ಸ್ಥಿತಿ ಗಂಭೀರ!
  • ಪಾಕಿಸ್ತಾನಕ್ಕೆ ಲಾಸ್ಟ್ ವಾರ್ನಿಂಗ್: ಪ್ರಧಾನಿ ಮೋದಿ ಖಡಕ್ ಸಂದೇಶಕ್ಕೆ ಬೆಚ್ಚಿಬಿದ್ದ ಶತ್ರುರಾಷ್ಟ್ರ!
  • ಲಷ್ಕರ್ ಭಯೋತ್ಪಾದಕ ಫಿನಿಶ್: ಸೆರೆ ಸಿಕ್ಕ ಇಬ್ಬರ ವಿಚಾರಣೆ!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In