Home ದಾವಣಗೆರೆ ಸಂಸತ್ತಿನ ಮುಂಗಾರು ಅಧಿವೇಶನ ಅಂತ್ಯ: ‘ವಂದೇ ಮಾತರಂ’ ಗೀತೆಯೊಂದಿಗೆ ಲೋಕಸಭೆ ಅನಿರ್ದಿಷ್ಟಾವಧಿ ಮುಂದೂಡಿಕೆ!
ದಾವಣಗೆರೆನವದೆಹಲಿಬೆಂಗಳೂರು

ಸಂಸತ್ತಿನ ಮುಂಗಾರು ಅಧಿವೇಶನ ಅಂತ್ಯ: ‘ವಂದೇ ಮಾತರಂ’ ಗೀತೆಯೊಂದಿಗೆ ಲೋಕಸಭೆ ಅನಿರ್ದಿಷ್ಟಾವಧಿ ಮುಂದೂಡಿಕೆ!

Share
ಅಧಿವೇಶನ
Share

ನವದೆಹಲಿ: ತೀವ್ರ ಗದ್ದಲ ಹಾಗೂ ಪ್ರತಿಭಟನೆಗಳ ನಡುವೆಯೇ ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನದ ಕಲಾಪಗಳು ಅಂತ್ಯಗೊಂಡಿದ್ದು, ರಾಷ್ಟ್ರಗೀತೆ ‘ವಂದೇ ಮಾತರಂ’ ಗಾಯನದೊಂದಿಗೆ ಲೋಕಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ವಿದ್ಯಾರ್ಥಿ ಚಳವಳಿ ಮತ್ತು ಸರಣಿ ಪ್ರತಿಭಟನೆಗಳ ವಿಷಯಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಕಸರತ್ತು ಹಾಗೂ ಗೊಂದಲ ಕೊನೆಯ ದಿನವೂ ಮುಂದುವರಿಯಿತು. ಈ ವಿಷಯದ ಕುರಿತು ಸುದೀರ್ಘ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದ ಆಹ್ವಾನ ಹಾಗೂ ಪ್ರಸ್ತಾವನೆಯನ್ನು ವಿರೋಧ ಪಕ್ಷಗಳು ತಿರಸ್ಕರಿಸಿದ್ದರಿಂದ ಎರಡೂ ಸದನಗಳಲ್ಲಿ ಗದ್ದಲ ಮತ್ತು ಘೋಷಣೆಗಳು ಮುಂದುವರಿದವು.

ಚರ್ಚೆಗೆ ವಿರೋಧ ಪಕ್ಷಗಳು ಸಮ್ಮತಿಸಿದರೆ ಅಧಿವೇಶನವನ್ನು ವಿಸ್ತರಿಸಲು ಅಥವಾ ವಿಶೇಷ ಕಲಾಪವನ್ನು ಕರೆಯಲು ಸಿದ್ಧವಿರುವುದಾಗಿ ಸರ್ಕಾರ ಸುಳಿವು ನೀಡಿತ್ತು. ಆದರೆ, ಒಮ್ಮತ ಮೂಡದ ಹಿನ್ನೆಲೆಯಲ್ಲಿ ಯಾವುದೇ ಮುಂದಿನ ದಿನಾಂಕವನ್ನು ನಿಗದಿಪಡಿಸದೆ ಲೋಕಸಭೆ ಕಲಾಪವನ್ನು ಮುಕ್ತಾಯಗೊಳಿಸಲಾಯಿತು.

Share

Leave a comment

Leave a Reply

Your email address will not be published. Required fields are marked *