ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಾ?

On: February 7, 2025 12:32 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-02-2025

ನವದೆಹಲಿ: ದೇಶದ ಜನರಿಗೆ ಸಿಹಿ ಸುದ್ದಿ. ಸದ್ಯದಲ್ಲಿಯೇ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಇದಕ್ಕೆ ಕಾರಣವೂ ಇದೆ.

ದಿನೇ ದಿನೇ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳದಿಂದ ಜನರು ಹೈರಾಣಾಗಿದ್ದರು. ಪ್ರತಿ ಲೀಟರ್ ಪೆಟ್ರೋಲ್ ಸದ್ಯಕ್ಕೆ 100 ರೂಪಾಯಿ ದಾಟಿದೆ. ವಾಹನ ಸವಾರರು ಯಾವಾಗ ಪೆಟ್ರೋಲ್ ದರ ಕಡಿಮೆಯಾಗುತ್ತದೆ ಎಂದು ಎದುರು ನೋಡುತ್ತಿದ್ದರು. ಆದ್ರೆ, ಈಗ ತೈಲ ದರದಲ್ಲಿ ಭಾರೀ ಕಡಿಮೆಯಾಗುವ ಮುನ್ಸೂಚನೆ ಸಿಕ್ಕಿದೆ.

ಪ್ರಪಂಚದಾದ್ಯಂತ ಕಚ್ಚಾ ತೈಲ ಬೆಲೆಗಳು ಸ್ಥಿರವಾಗುವ ಸನ್ನಿವೇಶ ಕಂಡು ಬರುತ್ತಿದೆ. ಮುಂದಿನ ಆರು ತಿಂಗಳಲ್ಲಿ ಪ್ರತಿ ಬ್ಯಾರೆಲ್‌ಗೆ $75 ರಿಂದ $80 ಆಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಭಾರತದಲ್ಲಿಯೂ ತೈಲ ದರ ಕಡಿಮೆ ಆಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎಲ್ಲಾ ರೀತಿಯ ಸರಕುಗಳ ಜೊತೆಗೆ, ಕಚ್ಚಾ ತೈಲದ ಬೆಲೆಗಳು ಸಹ ಹೆಚ್ಚಾಗಿದೆ. ಪ್ರಸ್ತುತ ಪ್ರಪಂಚದಾದ್ಯಂತ ಕಚ್ಚಾ ತೈಲ ಬೆಲೆಗಳು ಸ್ಥಿರವಾಗುತ್ತಿರುವ ಲಕ್ಷಣಗಳು ಕಂಡುಬರುತ್ತಿವೆ. ಮುಂದಿನ ಆರು ತಿಂಗಳಲ್ಲಿ ಪ್ರತಿ ಬ್ಯಾರೆಲ್‌ಗೆ $75 ರಿಂದ $80 ರವರೆಗೆ ಇರಬಹುದೆಂದು ನಿರೀಕ್ಷಿಸಲಾಗಿದೆ. ಇದು ನಮ್ಮ ದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಗೆ ಕಾರಣವಾಗಬಹುದು. ಇದಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಗಳಿಂದ ಹಿಡಿದು ರಷ್ಯಾದ ಕಚ್ಚಾ ತೈಲ ಪೂರೈಕೆಯವರೆಗೆ ಹಲವು ಕಾರಣಗಳಿವೆ. ಕೇರ್‌ಎಡ್ಜ್ ರೇಟಿಂಗ್ಸ್ ಪ್ರಕಾರ, ವಿಶ್ವಾದ್ಯಂತ, ವಿಶೇಷವಾಗಿ ಚೀನಾ ಮತ್ತು ಯುರೋಪ್‌ನಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗುತ್ತಿರುವುದರಿಂದ ತೈಲ ಬೇಡಿಕೆ ಕಡಿಮೆಯಾಗುತ್ತಿದೆ.

ಅಮೆರಿಕದಲ್ಲಿ ತೈಲ ಉತ್ಪಾದನೆಯನ್ನು ಹೆಚ್ಚಿಸಲು ಡೊನಾಲ್ಡ್ ಟ್ರಂಪ್ ಆಡಳಿತ ನಿರ್ಧರಿಸಿದೆ. ಇದು ಮಾರುಕಟ್ಟೆಗೆ ಹೆಚ್ಚುವರಿ ಕಚ್ಚಾ ತೈಲವನ್ನು ಒದಗಿಸುತ್ತದೆ. ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳ ಗುಂಪಾದ ಒಪೆಕ್, ಉತ್ಪಾದನೆಯನ್ನು ಕಡಿತಗೊಳಿಸದಿರಲು ನಿರ್ಧರಿಸಿದೆ. ಇದು ಪೂರೈಕೆ ಮಟ್ಟವನ್ನು ಸ್ಥಿರವಾಗಿಡಲು ಅನುಕೂಲವಾಗುತ್ತದೆ.

ಯುದ್ಧದಿಂದಾಗಿ ರಷ್ಯಾದ ಕಚ್ಚಾ ತೈಲ ರಫ್ತಿಗೆ ಯಾವುದೇ ಆತಂಕ ಇಲ್ಲ. ರಷ್ಯಾದಿಂದ ರಫ್ತು ಮುಂದುವರಿದಂತೆ ಕಚ್ಚಾ ತೈಲ ಪೂರೈಕೆ ಹೆಚ್ಚಾಗಿರುತ್ತದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment