Home ಕ್ರೈಂ ನ್ಯೂಸ್ ಚಿನ್ನ ಖರೀದಿಸದಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಮನವಿ: ಕಾರಣವೇನು ಗೊತ್ತಾ?
ಕ್ರೈಂ ನ್ಯೂಸ್ನವದೆಹಲಿಬೆಂಗಳೂರುವಾಣಿಜ್ಯ

ಚಿನ್ನ ಖರೀದಿಸದಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಮನವಿ: ಕಾರಣವೇನು ಗೊತ್ತಾ?

Share
ನರೇಂದ್ರ ಮೋದಿ
Share

ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಒಂದು ವರ್ಷಗಳ ಕಾಲ ಮದುವೆ ಸಮಾರಂಭಗಳಿಗಾಗಿ ಚಿನ್ನ ಖರೀದಿಸುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ವಿಶ್ವದಾದ್ಯಂತ ತೈಲ ಬೆಲೆ ಗಗನಕ್ಕೇರುತ್ತಿದ್ದು, ಭಾರತವು ತನ್ನ ತೈಲದ ಅವಶ್ಯಕತೆಗಾಗಿ ಹೆಚ್ಚಿನ ವಿದೇಶಿ ವಿನಿಮಯವನ್ನು ವ್ಯಯಿಸುತ್ತಿದೆ. ಈ ಸಂದರ್ಭದಲ್ಲಿ ಚಿನ್ನದ ಆಮದು ಹೆಚ್ಚಾದರೆ ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವ ಭೀತಿ ಇರುವುದರಿಂದ ಈ ಮಹತ್ವದ ಮನವಿ ಮಾಡಲಾಗಿದೆ.

ದೇಶದ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಮತ್ತು ವಿದೇಶಿ ವಿನಿಮಯ ಮೀಸಲು ಉಳಿಸಲು ನಾಗರಿಕರು ಸಹಕರಿಸಬೇಕು ಎಂದು ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಪೆಟ್ರೋಲ್-ಡೀಸೆಲ್ ಬಳಕೆಯನ್ನು ಮಿತಗೊಳಿಸುವುದು ಮತ್ತು ಅನಗತ್ಯ ಪ್ರಯಾಣ ತಪ್ಪಿಸುವುದರಿಂದ ದೇಶದ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ ಎಂದು ಪ್ರಧಾನಿ ಆಶಯ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಚಿನ್ನವನ್ನು “ಐಷಾರಾಮಿ” ಆಮದು ಎಂದು ನೋಡುತ್ತದೆ, ಇದನ್ನು ದೇಶವು ಇಂಧನದ “ಅಗತ್ಯ” ಆಮದನ್ನು ಭರಿಸಬಹುದೆಂದು ಖಚಿತಪಡಿಸಿಕೊಳ್ಳಲು ಮುಂದೂಡಬಹುದು.

Share

Leave a comment

Leave a Reply

Your email address will not be published. Required fields are marked *