SUDDIKSHANA KANNADA NEWS/ DAVANAGERE/ DATE:16-02-2025
ದಾವಣಗೆರೆ: ಮಟ್ಕಾ ಜೂಜಾಟದ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಹೊನ್ನಾಳಿ ಪಟ್ಟಣದ ವಡ್ಡಿನಕೆರೆ ಹಳ್ಳದಿಂದ ಟಿಬಿ ವೃತ್ತದ ಕಡೆಗೆ ಹೋಗುವ ಸಾರ್ವಜನಿಕ ಸ್ಥಳದಲ್ಲಿ ನಡೆದಿದೆ.
ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ್, ಮಂಜುನಾಥ,
ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿಪದ್ಮಶ್ರೀ ಗುಂಜಿಕರ್ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಸುನೀಲ್ ಬಿ. ತೇಲಿ ಹಾಗೂ ಸಿಬ್ಬಂದಿಗಳಾದ ಗೋವಿಂದರಾಜು, ಶಿವಕುಮಾರ, ಅಶೋಕ ಅವರನ್ನು ಒಳಗೊಂಡ ತಂಡವು ದಾಳಿ ಮಾಡಿದೆ.
ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿತರಾದ ಹೊನ್ನಾಳಿಯ ಸುನೀಲ್ (28), ಚನ್ನಪ್ಪ (48) ವಶಕ್ಕೆ ಪಡೆದು ಆರೋಪಿತರಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ 89,250 ನಗದು ಹಣ ಮತ್ತು 12 ಮಟ್ಕಾ ಚೀಟಿಗಳನ್ನು ವಶಕ್ಕೆ ಪಡೆದಿದ್ದು ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 78(3) ಕೆ.ಪಿ. ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಲಾಗಿದೆ.