SUDDIKSHANA KANNADA NEWS/ DAVANAGERE/ DATE-30-06-2025
ದಾವಣಗೆರೆ: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗಾಗಿ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ ಅಂಚೆ ಅಧೀಕ್ಷಕರು, ದಾವಣಗೆರೆ ಅಂಚೆ ವಿಭಾಗ ದಾವಣಗೆರೆ-577001 ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.