SUDDIKSHANA KANNADA NEWS/ DAVANAGERE/ DATE:20-01-2025
ದಾವಣಗೆರೆ: ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರೊಂದಿಗೆ ಚೆನ್ನೈ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು.
ಈ ಸಭೆಯಲ್ಲಿ ಕೇಂದ್ರ ಸರ್ಕಾರ ಆರೋಗ್ಯಕ್ಷೇತ್ರದಲ್ಲಿ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಎಲ್ಲಾ ಯೋಜನೆಗಳು ಸಾಮಾನ್ಯ ಜನರಿಗೆ ತಲುಪಲು ಅನುಸರಿಸಬೇಕಾದ ಮಾರ್ಗ ಸೂಚಿಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಇದರೊಂದಿಗೆ ಅನುಸರಿಸಬೇಕಾದ ಮಾರ್ಗಸೂಚನೆಗಳ ಬಗ್ಗೆ ತಿಳಿಸಲಾಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಸಂಸತ್ ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೊ.ರಾಮ್ ಗೋಪಾಲ್ ಯಾದವ್ ವಹಿಸಿದ್ದರು. ಸಭೆಯಲ್ಲಿ ಸಮಿತಿಯ ಸದಸ್ಯರು ಹಾಗೂ ಲೋಕಸಭಾ ಸದಸ್ಯರು ಉಪಸ್ಥಿತರಿದ್ದರು ಎಂದು ಸಂಸದರ ಆಪ್ತ ಸಹಾಯಕರಾದ ಹರೀಶ್ ಕೆ. ಎಲ್. ಬಸಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.