ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆಹಾರಮೇಳ, ದೀಪ ಸಂಜೀವಿನಿ ಕಾರ್ಯಕ್ರಮದಲ್ಲಿ ದೀಪಗಳ ಖರೀದಿಸಿ ಖುಷಿಪಟ್ಟ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್…!

On: October 30, 2024 10:01 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-10-2024

ದಾವಣಗೆರೆ: ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ. ಎಲ್ಲೆಡೆ ಹಣತೆಗಳು, ದೀಪಗಳ ಖರೀದಿ ಭರಾಟೆ ಜೋರಾಗಿದೆ. ದೀಪಗಳ ಹಬ್ಬವೇ ದೀಪಾವಳಿ. ಹಾಗಾಗಿ, ದೀಪಗಳಿಗೆ ಭಾರೀ ಬೇಡಿಕೆ ಇದೆ.

ಜಿಲ್ಲಾ ಪಂಚಾಯಿತಿ, ಎನ್.ಆರ್.ಎಲ್.ಎಂ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ನಗರದ ಬಿ.ಎಸ್ ಚನ್ನಬಸಪ್ಪ ಅಂಡ್ ಸನ್ಸ್ ಎಕ್ಸೂಲಿಜಿವ್ ಅಂಗಡಿ, ಡೆಂಟಲ್ ಕಾಲೇಜ್ ರೋಡ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ಹತ್ತಿರ ಆಯೋಜಿಸಿಲಾಗಿದ್ದ ದೀಪ ಸಂಜೀವಿನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದೀಪಗಳನ್ನು ಖರೀದಿಸಿದರು.

ಎನ್‍ಆರ್‍ಎಲ್‍ಎಂ ಯೋಜನೆಯ ಸಂಜೀವಿನಿ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಾದ ಮಣ್ಣಿನ ದೀಪ ಮತ್ತು ಇತರೆ ಅಲಂಕಾರಿಕ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲಾಯಿತು. 20 ಕ್ಕೂ ಹೆಚ್ಚು ಸಂಜೀವಿನಿ ಸ್ವಸಹಾಯ ಸಂಘಗಳು ಭಾಗವಹಿಸಿ ವಿವಿಧ ಬಗೆಯ ದೀಪಗಳನ್ನು, ಅಲಂಕಾರಿಕ ವಸ್ತುಗಳನ್ನು ಮತ್ತು ಆಹಾರ ಪದಾರ್ಥಗಳನ್ನು ಮಾರಾಟ ಮಾಡಿ, ಸುಮಾರು 1,10,000 ರೂಗಳವರೆಗೆ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಬಿ.ಎಸ್.ಚನ್ನಬಸಪ್ಪ ಅಂಗಡಿ ಮಾಲೀಕ ಬಿ.ಎಸ್ ಶಿವಕುಮಾರ್ ಕಾರ್ಯಕ್ರಮದ ಕುರಿತು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಯೋಜನಾ ನಿರ್ದೇಶಕಿ ರೇಷ್ಮಾ, ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಎನ್‍ಆರ್‍ಎಲ್‍ಎಂ ಡಿ.ಪಿ.ಎಂ ಭೋಜರಾಜ ಹಾಗೂ ಜಿಲ್ಲಾ, ತಾಲ್ಲೂಕು ಸಿಬ್ಬಂದಿಗಳು ಭಾಗವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment