ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉದ್ದು, ಸೋಯಾಬಿನ್‌ ಬೆಳೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ- ಪ್ರಹ್ಲಾದ್‌ ಜೋಶಿ

On: August 30, 2024 5:27 PM
Follow Us:
---Advertisement---

ನವದೆಹಲಿ: ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೊಂದು ಸಿಹಿ ಸುದ್ದಿ ಕೊಟ್ಟಿದೆ.

ಹೆಸರು ಮತ್ತು ಸೂರ್ಯಕಾಂತಿಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ ಉದ್ದು ಮತ್ತು ಸೋಯಾಬೀನ್‌ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ ಎಂಎಸ್‌ಪಿ ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆರ್‌ಎಸ್‌ಎಸ್

ಆರ್‌ಎಸ್‌ಎಸ್ ಎಷ್ಟು ದೊಡ್ಡದು? ನಿಷೇಧ ಸಾಧ್ಯವೇ: ಎಲ್ಲೂ ಇಲ್ಲದ ಕುತೂಹಲಕಾರಿ ಮಾಹಿತಿ ಇಲ್ಲಿದೆ

ಪಾಕಿಸ್ತಾನ

ಶಾಶ್ವತ ಕದನ ವಿರಾಮ ಚೆಂಡು ‘ಅಫ್ಘಾನ್ ತಾಲಿಬಾನ್ ಅಂಗಳದಲ್ಲಿ’: ಪಾಕಿಸ್ತಾನ ಪಿಎಂ ಶೆಹಬಾಜ್ ಷರೀಫ್!

ಅಬಕಾರಿ

4.42 ಕೆಜಿ ಚಿನ್ನ, 7.3 ಕೆಜಿ ಬೆಳ್ಳಿ, 1 ಕೋಟಿ ನಗದು, ಐಷಾರಾಮಿ ಕಾರುಗಳು ಪತ್ತೆ: ನಿವೃತ್ತ ಅಬಕಾರಿ ಅಧಿಕಾರಿ ಅಕ್ರಮ ಸಂಪತ್ತು 18 ಕೋಟಿ ರೂ.ಗೂ ಹೆಚ್ಚು!

ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ!

ಬೆಳ್ಳಿ

ಭಾರತದಲ್ಲಿ ನಾಲ್ಕು ತಿಂಗಳಿಂದ ಏರುಗತಿಯಲ್ಲಿ ಇದ್ದ ಬೆಳ್ಳಿ ಧಾರಣೆ ಕಡಿಮೆಯಾಗುತ್ತಾ? ಇಲ್ಲಿದೆ ಉತ್ತರ

ಚನ್ನಗಿರಿ

ಮಾಮೂಲು ಪಡೆಯುವಾಗ ಪ್ರಗ್ನೆಂಟ್ ಇರೋಲ್ವ: ಅರಣ್ಯಾಧಿಕಾರಿ ಶ್ವೇತಾ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಚನ್ನಗಿರಿ “ಕೈ” ಶಾಸಕ ಶಿವಗಂಗಾ ಬಸವರಾಜ್!

Leave a Comment