Home ದಾವಣಗೆರೆ 193 ಕೇಸ್ ನಲ್ಲಿ ಕೇವಲ 2 ದೋಷಿಪ್ರಾಪ್ತಿ, ರಾಜಕೀಯ ವಿರೋಧಿಗಳ ದಮನಕ್ಕೆ ಕೇಂದ್ರ ಸರ್ಕಾರದಿಂದ ಇಡಿ, ಸಿಬಿಐ, ಐಟಿ ಅಸ್ತ್ರ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

193 ಕೇಸ್ ನಲ್ಲಿ ಕೇವಲ 2 ದೋಷಿಪ್ರಾಪ್ತಿ, ರಾಜಕೀಯ ವಿರೋಧಿಗಳ ದಮನಕ್ಕೆ ಕೇಂದ್ರ ಸರ್ಕಾರದಿಂದ ಇಡಿ, ಸಿಬಿಐ, ಐಟಿ ಅಸ್ತ್ರ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

Share
ಪ್ರಿಯಾಂಕ್ ಖರ್ಗೆ
Share

ಬೆಂಗಳೂರು: ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ  ಮತ್ತು ಐಟಿ  ಇಲಾಖೆಗಳನ್ನು ರಾಜಕೀಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. 

ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,  ಕಳೆದ ಕೆಲವು ವರ್ಷಗಳಲ್ಲಿ ದಾಖಲಾದ ನೂರಾರು ಪ್ರಕರಣಗಳಲ್ಲಿ ಶೇಕಡಾ 97ಕ್ಕಿಂತ ಹೆಚ್ಚು ದಾಳಿಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆದಿವೆ ಎಂದು ಅವರು ಅಂಕಿಅಂಶಗಳ ಸಮೇತ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ED), ಸಿಬಿಐ (CBI) ಮತ್ತು ಆದಾಯ ತೆರಿಗೆ (IT) ಇಲಾಖೆಗಳನ್ನು ರಾಜಕೀಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಕಿಡಿಕಾರಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ದಾಳಿಯನ್ನು ಖಂಡಿಸಿ ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಷ್ಟು ಪ್ರಮಾಣದ ದಾಳಿಗಳು ನಡೆದಿದ್ದರೂ ಕೇವಲ 2 ಪ್ರಕರಣಗಳಲ್ಲಿ ಮಾತ್ರ ದೋಷಿಪ್ರಾಪ್ತಿಯಾಗಿರುವುದು (Convictions) ಈ ತನಿಖೆಗಳ ಹಿಂದಿರುವ ರಾಜಕೀಯ ದುರುದ್ದೇಶವನ್ನು ಸ್ಪಷ್ಟಪಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದಿರುವುದು ರಾಜಕೀಯ ಪ್ರೇರಿತ. ನನ್ನ ಮತ್ತು ಸಿಎಂ ಡಿ. ಕೆ. ಶಿವಕುಮಾರ್ ಅವರ ಮೇಲೂ ಕೇಂದ್ರದ ತನಿಖಾ ಸಂಸ್ಥೆಗಳು ದಾಳಿ ನಡೆಸಿದರೂ ಅಚ್ಚರಿಯೇನಿಲ್ಲ. ಕೇಂದ್ರ ಸರ್ಕಾರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯು ಇಂಥ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಂತೆ ನಡೆದುಕೊಳ್ಳುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles