ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮ: ಆರ್. ಅಶೋಕ್ ಸಿಡಿನುಡಿ

On: February 19, 2025 12:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-02-2025

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಉಡಾಫೆ ಮಾತನಾಡಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಕಿಡಿಕಾರಿದ್ದಾರೆ.

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮಾತಾದರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ
ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ ಎಂದು ಹೇಳಿದ್ದಾರೆ.

ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ. ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ
ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ಕೆ. ಜೆ. ಜಾರ್ಜ್ ಗೆ ತಿರುಗೇಟು ಕೊಟ್ಟಿದ್ದಾರೆ.

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ ಎಂದು ಆರ್. ಅಶೋಕ ಕಿಡಿಕಾರಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment