ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗಾಜಿನ ಮನೆಯಲ್ಲಿ ರಂಗೋಲಿ ಆಕರ್ಷಕ…. ಸಂವಿಧಾನ ಪೀಠಿಕೆಯ ಬಣ್ಣಬಣ್ಣದ ಚಿತ್ರಗಳು ಚಿತ್ತಾಕರ್ಷಕ

On: February 10, 2024 6:52 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-02-2024

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶುಕ್ರವಾರ ಹೆಣ್ಣು ಮಕ್ಕಳನ್ನು ರಕ್ಷಿಸಿ, ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ, ಹೆಣ್ಣು ಮಕ್ಕಳ ಮೇಲಿನ ಲಿಂಗ ಮತ್ತು ಶೋಷಣೆ ವಿರುದ್ಧ ಹೋರಾಡಿ ಅಭಿಯಾನದಡಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು.

ಈ ವೇಳೆ ಭಾರತದ ಭೂಪಟ ಜೊತೆಗೆ ಸಂವಿಧಾನ ಪೀಠಿಕೆ ಅರಳಿತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಸಂತಿ ಉಪ್ಪಾರ್ ಸೇರಿದಂತೆ ಮತ್ತಿತರರು ಇದ್ದರು.

ಸಂವಿಧಾನ ಜಾಗೃತಿ ಜಾಥಾ:

ದಾವಣಗೆರೆ: ಸಂವಿಧಾನದ ಆಶಯವನ್ನು ಜನಸಾಮಾನ್ಯರಿಗೆ ತಿಳಿಸಿಕೊಡಲು ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯಾದ್ಯಂತ ನಡೆಯತ್ತಿದ್ದು, ಫೆ. 11 ಮತ್ತು 12 ರಂದು ಚನ್ನಗಿರಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಳಗಳಲ್ಲಿ ಸಂಚರಿಸಲಿದೆ ಎಂದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.

ಜಾಥಾವು ಫೆಬ್ರವರಿ 11 ರಂದು ಚನ್ನಗಿರಿ ತಾಲ್ಲೂಕಿನ ಲಿಂಗಾದಹಳ್ಳಿ-ನಲ್ಲೂರು, ನಲ್ಲೂರು-ಇಟ್ಟಿಗೆ, ಇಟ್ಟಿಗೆ-ಬುಳಸಾಗರ, ಬುಳಸಾಗರ-ಕಗತ್ತೂರು, ಕಗತ್ತೂರು-ಅಗರಬನ್ನಿಹಟ್ಟಿ, ಅಗರಬನ್ನಿಹಟ್ಟಿ-ಗರಗ, ಗರಗ-ಮುದಿಗೆರೆ ಮುದಿಗೆರೆ ಗ್ರಾಮದಿಂದ ಮುಂದಿನ ಗ್ರಾಮಗಳಿಗೆ ಸಂಚರಿಸಲಿದೆ.

12ರಂದು ಚನ್ನಗಿರಿ ತಾಲ್ಲೂಕಿನ ಮುದಿಗೆರೆ-ಹಿರೆಮಳಲಿ, ಹಿರೆಮಳಲಿ-ಚೆನ್ನಾಶಪುರ, ಚೆನ್ನಾಶಪುರ-ಜೋಳದಾಳ್, ಜೋಳದಾಳ್-ಹರೋನಹಳ್ಳಿ, ಹಾರೋನಹಳ್ಳಿ-ಅಜ್ಜಿಹಳ್ಳಿ, ಅಜ್ಜಿಹಳ್ಳಿ-ಚನ್ನಗಿರಿ ಟೌನ್, ಚನ್ನಗಿರಿ ಟೌನ್-ತಿಪ್ಪಗೊಂಡನಹಳ್ಳಿ ಜಾಥಾವು ತಿಪ್ಪಗೊಂಡನಹಳ್ಳಿ ಗ್ರಾಮದಿಂದ ಮುಂದಿನ ಗ್ರಾಮಗಳಿಗೆ ಸಂಚರಿಸಲಿದೆ. ಗ್ರಾಮಸ್ಥರು ಸಾರ್ವಜನಿಕರು ಜಾಥಾ ಯಶ್ವಸಿಗೊಳಿಸಲು ಕೋರಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment