ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಟ್ಯೂಷನ್ ತರಗತಿಗೆ ತೆರಳುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕ ಬಂಧನ…!

On: November 4, 2024 10:28 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-11-2024

ನವದೆಹಲಿ: ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಗೈಘಾಟಾ ಪ್ರದೇಶದಲ್ಲಿ ಟ್ಯೂಷನ್ ಗೆ ಹೋಗುತ್ತಿದ್ದಾಗ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಲಾಗಿದೆ. ಆಕೆಯ ಹಿಂಬಾಲಕರೇ ಈ ಕೃತ್ಯ ಎಸಗಿದ್ದಾರೆ. 20 ವರ್ಷದ ಯುವಕನನ್ನು ಬಂಧಿಸಲಾಗಿದೆ. 14ರ ಹರೆಯದ ಬಾಲಕಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಈ ವಿಚಾರ ಗೊತ್ತಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಬಾಲಕಿಗೆ ನಿತ್ಯವೂ ಕಿರುಕುಳ ನೀಡುತ್ತಿದ್ದ. ಬಾಲಕಿ ಶುಕ್ರವಾರ ಟ್ಯೂಷನ್ ತರಗತಿಗೆ ತೆರಳುತ್ತಿದ್ದಾಗ ಯುವತಿಯನ್ನು ಅಪಹರಿಸಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರಿನಲ್ಲಿದ್ದ ಆರೋಪಿಯು ಆಕೆಯ ಕೈಗಳನ್ನು ಕಟ್ಟಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ರಾತ್ರಿಯ ನಂತರ ಆಕೆಯನ್ನು ತನ್ನ ಮನೆಯ ಬಳಿ ಬಿಡುವ ಮೊದಲು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಲಕಿ ಈ ವಿಚಾರವನ್ನು ಮೊದಲಿಗೆ ಯಾರಿಗೂ ಹೇಳಿರಲಿಲ್ಲ. ಶನಿವಾರ ಮನೆಯಲ್ಲಿ ನೇಣು ಹಾಕಿಕೊಳ್ಳಲು ಯತ್ನಿಸಿದಾಗ ಮನೆಯವರು ಬಾಲಕಿ ವಿಚಾರಿಸಿದ್ದಾರೆ. ಆಗ ಘಟನೆ ಬಗ್ಗೆ ಬಾಲಕಿಯು ವಿವರಿಸಿದ್ದಾಳೆ.

ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಾದ ನಂತರ, ಆರೋಪಿಯನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ. ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ”ಎಂದು ಪೊಲೀಸ್ ಅಧಿಕಾರಿಯೊಬ್ಬರು
ತಿಳಿಸಿದ್ದಾರೆ.

ಕುಟುಂಬದವರ ಪ್ರಕಾರ, ಯುವಕರು ಒಂದೂವರೆ ವರ್ಷಗಳಿಂದ ಕಿರುಕುಳ ನೀಡುತ್ತಿದ್ದರು. “ಕೆಲವು ತಿಂಗಳ ಹಿಂದೆ ಈ ಪ್ರದೇಶದಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ಯುವಕ ತಪ್ಪು ಒಪ್ಪಿಕೊಂಡಿದ್ದನಲ್ಲದೇ, ಕ್ಷಮೆಯಾಚಿಸಿದ್ದ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಈತನಿಗೆ ತ್ವರಿತ ವಿಚಾರಣೆ ನಡೆಸಿ ಮರಣದಂಡನೆ ವಿಧಿಸಬೇಕೆಂದು ಕುಟುಂಬಸ್ಥರು ಮತ್ತು ಪೋಷಕರು ಒತ್ತಾಯಿಸಿದ್ದಾರೆ.

ದೂರು ದಾಖಲಿಸಲು ಶನಿವಾರ ರಾತ್ರಿ ಬಾಲಕಿಯ ಕುಟುಂಬದೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದ ಸ್ಥಳೀಯ ಬಿಜೆಪಿ ಶಾಸಕ ಸುಬ್ರತಾ ಠಾಕೂರ್, “ಘಟನೆಯ ಸುದ್ದಿ ತಿಳಿದ ನಂತರ ನಾನು ಪೊಲೀಸ್ ಠಾಣೆಗೆ ಬಂದಿದ್ದೇನೆ. ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಆರೋಪಿ ಯಾರೇ ಆಗಿರಲಿ ಶಿಕ್ಷೆಯಾಗಬೇಕು. ಆಡಳಿತ ಪಕ್ಷದಿಂದ ಬಾಲಕಿಯ ಕುಟುಂಬಕ್ಕೆ ಬೆದರಿಕೆ ಇದೆ ಎಂಬ ಬಿಜೆಪಿ ಆರೋಪವನ್ನು ಸ್ಥಳೀಯ ಟಿಎಂಸಿ ಪದಾಧಿಕಾರಿ ಪ್ರಸೇನಜಿತ್ ಘೋಷ್ ತಿರಸ್ಕರಿಸಿದ್ದಾರೆ.

ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು ತನ್ನ ಕ್ರಮ ಜರುಗಿಸಲಿದೆ. ತೃಣಮೂಲ ಕಾಂಗ್ರೆಸ್ ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಘೋಷ್ ತಿರುಗೇಟ ನೀಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment