SUDDIKSHANA KANNADA NEWS/ DAVANAGERE/ DATE:03-01-2025‘
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಡಿವೈಎಸ್ಪಿಯೊಬ್ಬರ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೃಹ ಸಚಿವರಿಗೆ ಇರಿಸು ಮುರಿಸು ತಂದಿದೆ.
ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ದೂರು ನೀಡಲು ಬಂದಿದ್ದರು. ಈ ವೇಳೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಕಾಮತೃಷೆ ತೀರಿಸಿಕೊಳ್ಳಲು ಆಹ್ವಾನ ನೀಡಿದ್ದಾರೆ. ಆದ್ರೆ, ಮಹಿಳೆಯು ವಿಡಿಯೋದಲ್ಲಿ ಡಿವೈಎಸ್ಪಿ ಹೇಳಿದ ರೀತಿಯಲ್ಲಿ ಮಾಡಿದ್ದರೂ ಆ ಬಳಿಕ ದೂರು ನೀಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಎಸ್ಕೇಪ್ ಆಗಿದ್ದಾರೆ.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರುಮಾಡಿದ್ದಾರೆ. ಇನ್ನು ಮಹಿಳೆ ಜೊತೆ ಡಿವೈಎಸ್ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ.
ಘಟನೆಯು ಪೊಲೀಸ್ ಇಲಾಖೆಗೆ ಇರಿಸು ಮುರಿಸು ತಂದಿದ್ದು, ಕೂಡಲೇ ಕ್ರಮ ಜರುಗಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನವರು ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ತನ್ನ ಕಚೇರಿಯಲ್ಲಿನ ಏಕಾಂತ ಗೃಹ ಅಥವಾ ಶೌಚಾಲಯದಲ್ಲಿ ಕರೆದುಕೊಂಡು ಹೋಗಿದ್ದು ಅನೈತಿಕ ಚಟುವಟಿಕೆ ಆರಂಭಿಸಿದ್ದು, ಇದನ್ನು ಕೆಲವರು ಕಿಟಕಿಯ ಮೂಲಕ ಚಿತ್ರೀಕರಣ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದೊಂದು ಪೊಲೀಸ್ ಇಲಾಖೆ ಗೌರವಕ್ಕೆ ಧಕ್ಕೆ ತರುವ ಕೆಲಸ. ಈ ವಿಚಾರ ಗಮನಕ್ಕೆ ಬಂದಿದ್ದು, ನಾನೂ ಸಹ ವೀಡಿಯೋ ವೀಕ್ಷಣೆ ಮಾಡಿದ್ದೇನೆ. ಈ ವಿಚಾರ ಬಗ್ಗೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಯಾವುದೇ ಕಾರಣಕ್ಕೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಇಲಾಖೆ ಸಹಿಸಿಕೊಳ್ಳಲ್ಲ. ಮಹಿಳೆಯನ್ನು ಪತ್ತೆ ಹಚ್ಚಲಾಗುತ್ತಿದ್ದು, ಅವರು ದೂರು ನೀಡಿದಲ್ಲಿ ಡಿವೈಎಸ್ಪಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರು ಎಸ್ಪಿ ಅಶೋಕ್ ಮಾಹಿತಿ ನೀಡಿದ್ದಾರೆ.