ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡ ಆರ್ ಸಿಬಿ: 6 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮುತ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮ!

On: June 3, 2025 11:27 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-03-06-2025

ಅಹಮದಾಬಾದ್: ಪಂಜಾಬ್ ವಿರುದ್ಧ ನಡೆದ ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ಗೆಲ್ಲುವ ಮೂಲಕ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದೆ. ಈ ಮೂಲಕ ಮೊದಲ ಬಾರಿಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಪಂಜಾಬ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್  6  ರನ್ ಗಳಿಂದ ಜಯಭೇರಿ ಬಾರಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಸಂಭ್ರಮಿಸಿತು.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಆರಂಭಿಕ ಉತ್ತಮ ಆಗಿರಲಿಲ್ಲ. ಫಿಲ್ ಸಾಲ್ಟ್ ಕೇವಲ 16 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ವಿರಾಟ್ ಕೊಹ್ಲಿ ತಾಳ್ಮೆಯ ಆಟವಾಡಿದರೂ 43 ರನ್ ಗಳಿಸಿ ಔಟ್ ಆದರು. ಈ ರನ್ ಗಳಿಸಲು 35 ಬಾಲ್ ಗಳನ್ನು ತೆಗೆದುಕೊಂಡರು.

ಮಯಾಂಕ್ ಅಗರ್ ವಾಲ್ ಸಹ ಹೆಚ್ಚು ರನ್ ಗಳಿಸಲಿಲ್ಲ. 18 ಎಸೆತಗಳಲ್ಲಿ 24 ರನ್ ಗಳಿಸಿ ಔಟ್ ಆದರು. ರಜತ್ ಪಡಿದಾರ್ 26, ಲಿಯಾಮ್ ಲಿವಿಂಗ್ ಸ್ಟನ್ 25 ರನ್ ಗಳಿಸಿದರೆ, ಜಿತೇಶ್ ಶರ್ಮಾ ಅಬ್ಬರಿಸಿದರಾದರೂ 10 ಎಸೆತಗಳಲ್ಲಿ ಎರಡು ಬೌಂಡರಿ, ಎರಡು ಸಿಕ್ಸರ್ ಬಾರಿಸಿ ರಂಜಿಸಿದರು. ಶೆಪರ್ಡ್ 17 ರನ್ ಗಳಿಸಿದರು. 20 ಓವರ್ ಗಳಲ್ಲಿ ಅಂತಿಮವಾಗಿ ಆರ್ ಸಿಬಿ 9 ವಿಕೆಟ್ ಕಳೆದುಕೊಂಡು 190 ರನ್ ಪೇರಿಸಿತು. ಪಂಜಾಬ್ ಪರ ಹರ್ಷದೀಪ್ ಸಿಂಗ್ ದುಬಾರಿಯಾರೂ 3 ವಿಕೆಟ್ ಪಡೆದು ಮಿಂಚಿದರು. ಜಮಿಸನ್ ಸಹ ದುಬಾರಿಯಾಗಿ 48 ರನ್ ಕೊಟ್ಟು 3 ವಿಕೆಟ್ ಪಡೆದರು.

191 ರನ್ ಗಳ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಪ್ರಿಯಾಂಕ್ ಆರ್ಯಾ 24, ಪ್ರಭಸಿಮರ್ನ್ ಸಿಂಗ್ 26 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಆರ್ ಸಿಬಿ ನಡುಗಿಸಿದ ಜೊಶ್ ಇಂಗ್ಲಾಶ್ 23 ಎಸೆತಗಳಲ್ಲಿ 39 ರನ್ ಬಾರಿಸಿ ರಂಜಿಸಿದರು. ಶ್ರೇಯಸ್ ಅಯ್ಯರ್ ಕೇವಲ 1 ರನ್ ಗಳಿಸಿ ಪೆವಿಲಿಯನ್ ಗೆ ಮರಳುತ್ತಿದ್ದಂತೆ ಆರ್ ಸಿಬಿ ಆಟಗಾರರು ಕುಣಿದು ಕುಪ್ಪಳಿಸಿದರು. ಆರ್ ಸಿಬಿ ಪರ 4 ಓವರ್ ಬೌಲ್ ಮಾಡಿದ ಕ್ರುನಾಲ್ ಪಾಂಡ್ಯ ನಾಲ್ಕು ಓವರ್ ಗಳಲ್ಲಿ ಕೇವಲ 17 ರನ್ ನೀಡಿ 2 ವಿಕೆಟ್ ಪಡೆದರು. ಭುವನೇಶ್ವರ್ ತನ್ನ ಮೂರನೇ ಓವರ್ ನಲ್ಲಿ ವಿಕೆಟ್ ಪಡೆದು ಮಿಂಚಿದರು.

ಎರಡೂ ತಂಡಗಳು ಗೆಲುವಿಗೆ ಶ್ರಮಿಸಿದವು. ಪಂದ್ಯವು ರೋಚಕವಾಗಿತ್ತು. ಆರ್ ಸಿಬಿ ಬ್ಯಾಟಿಂಗ್ ಮಾಡುವಾಗ ಇಷ್ಟೊಂದು ರನ್ ಪೇರಿಸುತ್ತದೆ ಎಂದು ಊಹಿಸುವುದು ಕಷ್ಟವಾಗಿತ್ತು. ಮಳೆ ಬಂದ ಕಾರಣ ಬಾಲ್ ಅಂದುಕೊಂಡಂತೆ ಬ್ಯಾಟ್ಸ್ ಮನ್ ಗಳಿಗೆ ಬರುತ್ತಿರಲಿಲ್ಲ. ಆರ್ ಸಿಬಿ 190 ರನ್ ಪೇರಿಸಲು ಪರದಾಡಿತು.

ಇನ್ನು ಈ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಇಲೆವೆನ್ ಗೆಲ್ಲುವ ಸಾಧ್ಯತೆ ಇತ್ತಾದರೂ ಅಂತಿಮವಾಗಿ ಆರ್ ಸಿಬಿ ಗೆಲುವಿನ ನಗೆ ಬೀರಿತು. ಈ ಮೂಲಕ 18 ವರ್ಷಗಳ ಪ್ರಶಸ್ತಿ ಇಲ್ಲದ ಬರಗಾಲ ನಿವಾರಿಸಿಕೊಂಡು ಕುಣಿದು ಕುಪ್ಪಳಿಸಿತು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ಇಂದಿನಿಂದ ಶುರುವಾಯ್ತು ದಾವಣಗೆರೆಯಿಂದ ಶ್ರೀಶೈಲಂಗೆ ನಾನ್ ಎಸಿ “ಪಲ್ಲಕ್ಕಿ” ನೂತನ ಬಸ್: ಮಾರ್ಗ ವಿವರದ ಡೀಟೈಲ್ಸ್

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ರೂಪದರ್ಶಿ

ಶವವಾಗಿ ಪತ್ತೆಯಾದ ರೂಪದರ್ಶಿ “ಖುಷಿ” ದೇಹದ ಮೇಲೆ ಗಾಯಗಳು: ಬಂಧಿತ ಗೆಳೆಯ ಖಾಸಿನ್ ಅಹ್ಮದ್ ಸುತ್ತ ಅನುಮಾನದ ಹುತ್ತ!

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment