ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾರ್ಮಿಕರ ಭವಿಷ್ಯನಿಧಿ ಪಾವತಿಸದ ಉದ್ಯೋಗದಾತರಿಂದ ವಸೂಲಾತಿ ಆಂದೋಲನ

On: February 8, 2024 11:18 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-02-2024

ದಾವಣಗೆರೆ: ಕಾರ್ಮಿಕರ ಭವಿಷ್ಯನಿಧಿಗೆ ವಂತಿಗೆಯನ್ನು ಪಾವತಿಸದ ಸಂಸ್ಥೆ, ಉದ್ದಿಮೆಗಳಿಂದ ವಿಶೇಷ ವಸೂಲಾತಿ ಆಂದೋಲನ ಕೈಗೊಳ್ಳಲಾಗಿದೆ.

ಐದು ಲಕ್ಷಕ್ಕಿಂತ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸಂಸ್ಥೆ, ಉದ್ದಿಮೆಗಳಿಂದ ವಸೂಲಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಶಿವಮೊಗ್ಗ ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಜಿಲ್ಲೆಯಲ್ಲಿನ ಬಿಕೆಆರ್ ಸ್ವಾಮಿ ಸೆಕ್ಯೂರಿಟಿ ಸರ್ವೀಸ್, ಎಂ.ಸಿ.ಸಿ.ಬಿ.ಬ್ಲಾಕ್, 6 ನೇ ಮುಖ್ಯ ರಸ್ತೆಯ 2 ನೇ ಕ್ರಾಸ್, ದಾವಣಗೆರೆ ಈ ಸಂಸ್ಥೆಯು ರೂ.1,14,48,493 ರೂ.ಗಳ ಬಾಕಿ ಉಳಿಸಿಕೊಂಡಿದೆ. ಹರಿಹರದ ಸೋನ್ಲಕರ್ ಟೂಲ್ ವಕ್ರ್ಸ್ ಪ್ರೈ.ಲಿ, ಹರಿಹರ ಇವರು ರೂ.54,84,159 ಬಾಕಿ ಪಾವತಿಸಬೇಕು. ದಾವಣಗೆರೆ ಕೆ.ಆರ್.ರಸ್ತೆಯಲ್ಲಿನ ಅಲ್ತಾಫ್ ಕ್ರೆಡಿಟ್ ಕೋ-ಆಫರೇಟಿವ್ ಸೊಸೈಟಿ ಇವರು ರೂ.9,56,859 ಗಳನ್ನು ಮತ್ತು ಹರಪನಹಳ್ಳಿಯ ಕಾಟ್ರಾ ಪೊಟೋಶಿಯಂ ಪ್ರೈ.ಲಿ ಇವರು ರೂ.50 ಲಕ್ಷ ಕಾರ್ಮಿಕರ ಭವಿಷ್ಯನಿಧಿ ವಂತಿಗೆಯನ್ನು ಪಾವತಿಸದೇ ಬಾಕಿ ಉಳಿಸಿಕೊಂಡಿರುತ್ತಾರೆ.

ಈ ಸಂಸ್ಥೆ, ಉದ್ಯೋಗದಾತರು, ನಿರ್ದೇಶಕರು ಆಸ್ತಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಇದ್ದಲ್ಲಿ ಅದನ್ನು  ro.shivamogga@epfindia.gov.in    ನಲ್ಲಿ ಹಂಚಿಕೊಳ್ಳಬಹುದಾಗಿದೆ. ಬಾಕಿಯ ವಸೂಲಾತಿಗೆ ಬಲವಂತದ ಕ್ರಮಗಳನ್ನು ಕೈಗೊಳ್ಳುವ ಮೊದಲು ಉದ್ಯೋಗದಾತರು ತಮ್ಮ ಭವಿಷ್ಯನಿಧಿ ಕೊಡುಗೆಗಳನ್ನು ಸಕಾಲದಲ್ಲಿ ಪಾವತಿಸಲು ಶಿವಮೊಗ್ಗ ಪ್ರಾದೇಶಿಕ ಕಚೇರಿ ವಸೂಲಾತಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment