• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಭದ್ರಾ ಡ್ಯಾಂ ನೀರು ಐಸಿಸಿ ಸಭೆ ನಿರ್ಣಯದ ವೇಳಾಪಟ್ಟಿಯಂತೆ ಹರಿಸುವಂತೆ ರೈತರ ಒತ್ತಾಯ ಯಾಕೆ…?

Editor by Editor
January 20, 2025
in ದಾವಣಗೆರೆ
0
ಭದ್ರಾ ಡ್ಯಾಂ ನೀರು ಐಸಿಸಿ ಸಭೆ ನಿರ್ಣಯದ ವೇಳಾಪಟ್ಟಿಯಂತೆ ಹರಿಸುವಂತೆ ರೈತರ ಒತ್ತಾಯ ಯಾಕೆ…?

SUDDIKSHANA KANNADA NEWS/ DAVANAGERE/ DATE:20-01-2025

ದಾವಣಗೆರೆ: ಭದ್ರಾ ನೀರಾವರಿ ಸಲಹಾ ಸಮಿತಿ (ಐ.ಸಿ.ಸಿ) ಸಭೆ ನಿರ್ಣಯದ ವೇಳಾಪಟ್ಟಿಯಂತೆ ರೈತನ ಜಮೀನಿಗೆ ನೀರು ಹರಿಯುವಂತೆ ಕ್ರಮವಹಿಸಬೇಕು ಎಂದು ರೈತ ಒಕ್ಕೂಟ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದೆ.

ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ಬೇಸಿಗೆ ಹಂಗಾಮಿಗೆ ನೀರು ಹರಿಸಲು ಪ್ರಾರಂಭಿಸಿ ಇಂದಿಗೆ 12 ದಿನಗಳಾದ್ರೂ ತ್ಯಾವಣಿಗೆ ಉಪವಿಭಾಗದ ಕಾಲುವೆಗಳಿಗೆ ನೀರು ಬಂದಿಲ್ಲ. ಇದರಿಂದ ಬೇಸಿಗೆ ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆಯಲು ಸಸಿಮಡಿ ಮಾಡಿಕೊಳ್ಳಲು, ಜಮೀನು ಉಳಿಮೆ ಮಾಡಿಕೊಂಡು ಬೀಜ ಉಗ್ಗುವ ಚೆಲ್ಲು ಪದ್ಧತಿಯ ಮೂಲಕ ನೇರ ಬಿತ್ತನೆ ಮಾಡುವ ರೈತರಿಗೆ ಅನಾನುಕೂಲವಾಗಿದೆ ಎಂದು ತಿಳಿಸಿತು.

ತೋಟಗಳಿಗೂ ನೀರು ಹಾಯಿಸಲು ಸಾಧ್ಯವಾಗಿಲ್ಲ. ಇದರಿಂದ ಈ ಭಾಗದ ರೈತರು ಆತಂಕಗೊಂಡಿದ್ದಾರೆ. ನೀರಾವರಿ ಇಲಾಖೆ ಇಂಜಿನಿಯರ್ ಗಳನ್ನು ವಿಚಾರಿಸಿದರೆ ನೀರು ನಿರ್ವಹಣೆ ಮಾಡುವ ಸೌಡಿಗಳು ಕೆಲಸಕ್ಕೆ ಬಾರದೆ ಮುಷ್ಕರ ನಡೆಸುತ್ತಿದ್ದಾರೆ. ಅವರು ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದು, ಅವರಿಗೆ ಸುಮಾರು 10 ತಿಂಗಳಿನಿಂದ ವೇತನವಾಗಿಲ್ಲ ನಾವು ಏನು ಮಾಡಲು ಸಾಧ್ಯ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿ ಜಾರಿ ಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿತು.

ಪ್ರಸ್ತುತ ಡ್ಯಾಂನಲ್ಲಿ ನೀರಿನ ಮಟ್ಟ 180 ಅಡಿ ಇದ್ದು, ಪ್ರತಿನಿತ್ಯ ಹೊರಹರಿವು 3277 ಕ್ಯೂಸೆಕ್ಸ್ ನೀರನ್ನು ನಾಲೆಗಳಿಗೆ ಹರಿಸಲಾಗುತ್ತಿದೆ. ನೀರು ನಿರ್ವಹಣೆ ಇಲ್ಲದೆ ವ್ಯರ್ಥವಾಗಿ ಹಳ್ಳ ಕೊಳ್ಳಗಳಿಗೆ ಹರಿದು ಹೋಗುತ್ತಿದೆ. ಡ್ಯಾಂನಿಂದ ಸರಿಯಾದ ಪ್ರಮಾಣದಲ್ಲಿ ನೀರು ಹರಿಸುತ್ತಿದ್ರೂ ಕಾಲುವೆಗಳಲ್ಲಿ ನೀರು ಹರಿದು ಬರುತ್ತಿಲ್ಲ. ಅಂಗೈಯಲ್ಲಿ ಬೆಣ್ಣೆ ಇದ್ರೂ ತುಪ್ಪಕ್ಕೆ ಬರ (ಹಲ್ಲಿದ್ದರೂ ಕಡಲೆ ಇಲ್ಲ) ಎಂಬಂತಹ ಸ್ಥಿತಿ ರೈತರದ್ದಾಗಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ತಕ್ಷಣ ಸೌಡಿಗಳ ಬಾಕಿ ವೇತನ ಬಿಡುಗಡೆ ಮಾಡಿ, ಮುಷ್ಕರದಲ್ಲಿ ನಿರತರಾಗಿರುವ ಸೌಡಿಗಳ ಮನವೊಲಿಸಿ ಕೆಲಸಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ಮಾಡಬೇಕು. ಕಾಲುವೆಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛ ಮಾಡಿಸಬೇಕು. ಹೂಳು ತೆಗೆಸಬೇಕು. ಕಾಲುವೆಗಳ ಕಟ್ಟಡಗಳ ದುರಸ್ಥಿ ಮಾಡಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡುವ ಮೂಲಕ ಕೊನೆ ಭಾಗಕ್ಕೆ ತಲುಪುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿತು.

ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ರೈತ ಮುಖಂಡರಾದ ಕೊಳೇನಹಳ್ಳಿ ಬಿ ಎಂ ಸತೀಶ್, ಬೆಳವನೂರು ನಾಗೇಶ್ವರರಾವ್, ಕುಂದುವಾಡದ ಹೆಚ್.ಜಿ.ಗಣೇಶಪ್ಪ, ದೂಡ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಮೇಯರ್ ಹೆಚ್.ಎನ್.ಗುರುನಾಥ್ ಮುಂತಾದವರು ಉಪಸ್ಥಿತರಿದ್ದರು.

ಎಡಿಸಿ ಭರವಸೆ

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಲೋಕೇಶ್ ರವರು ವಿಷಯ ತುಂಬಾ ಗಂಭೀರವಾಗಿದೆ. ಶೀಘ್ರದಲ್ಲೇ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ಕರೆದು ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

Next Post
ಸೂರಗೊಂಡನಕೊಪ್ಪದಲ್ಲಿ ಫೆ.13ರಿಂದ 15ರವರೆಗೆ ಶ್ರೀ ಸಂತ ಸೇವಾಲಾಲ್ ಜಯಂತಿ: ಏನೆಲ್ಲಾ ಸಿದ್ಧತೆ ಕೈಗೊಳ್ಳಲಾಗುತ್ತೆ?

ಸೂರಗೊಂಡನಕೊಪ್ಪದಲ್ಲಿ ಫೆ.13ರಿಂದ 15ರವರೆಗೆ ಶ್ರೀ ಸಂತ ಸೇವಾಲಾಲ್ ಜಯಂತಿ: ಏನೆಲ್ಲಾ ಸಿದ್ಧತೆ ಕೈಗೊಳ್ಳಲಾಗುತ್ತೆ?

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಆಸ್ತಿ ವಿಭಜನೆಗೆ ಒಡಹುಟ್ಟಿದವರಿಂದ ಸಂಪೂರ್ಣ ಬೆಂಬಲ, ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ
  • ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕಡೆಗಣಿಸಿದ್ರಾ? ಸಂಭ್ರಮಾಚರಣೆಯಲ್ಲಿ 2 ವರ್ಷದ “ಕೈ” ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಲಿಲ್ಲ ಯಾಕೆ?
  • ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ
  • ಮೂವರು ಮನೆಗಳ್ಳರ ಸೆರೆ: 7,30,000 ರೂ. ಮೌಲ್ಯದ ಚಿನ್ನಾಭರಣ ವಶ
  • “ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ”

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In