ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತೆರೆ ಬಿತ್ತು ಎಲ್ಲಾ ಪ್ರಹಸನ – ಗೊಂದಲಗಳಿಗೆ, ಸ್ವಾಭಿಮಾನದ ಪುನರಾಗಮನ: ಟಿ. ಜಿ. ರವಿಕುಮಾರ್ ಸಂತಸ

On: February 7, 2024 10:25 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-02-2024

ದಾವಣಗೆರೆ: ಕೆಲ ತಿಂಗಳ‌ ಹಿಂದೆ ಪತ್ರಿಕೆಯೊಂದರಲ್ಲಿ ಗುರುಸಿದ್ಧನಗೌಡ ಮತ್ತು ಪುತ್ರರು ಬಿಜೆಪಿಯಿಂದ ಉಚ್ಛಾಟನೆ ಎಂಬ ಸುದ್ದಿ ಜಿಲ್ಲಾ ಮಟ್ಟದಲ್ಲಿ ಒಂದಷ್ಟು ಗೊಂದಲ, ಅಸಮಾಧಾನ, ಬೇಗುದಿ ಹೊರಹಾಕಿತ್ತು. ಈ ಸುದ್ದಿಯು ವೈಯುಕ್ತವಾಗಿ ನಮಗೂ ಬೇಸರ ಉಂಟು ಮಾಡಿತ್ತು. ಆದ್ರೆ, ಈಗ ಮತ್ತೆ ಬಿಜೆಪಿಗೆ ಸ್ವಾಭಿಮಾನದ ಪುನರಾಗಮನ ಆಗಿದೆ ಎಂದು ಆರೈಕೆ ಆಸ್ಪತ್ರೆ ಮುಖ್ಯಸ್ಥರೂ ಆದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಟಿ. ಜಿ. ರವಿಕುಮಾರ್ ಹೇಳಿದ್ದಾರೆ.

ಉಚ್ಚಾಟನೆ ಸೇರಿದಂತೆ ಎಲ್ಲಾ ಗೊಂದಲಗಳ ಪ್ರಹಸನಗಳಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಇಂದು ತೆರೆ ಎಳೆದು ನಮ್ಮ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳಿಗೆ ತೃಪ್ತಿ ಮತ್ತು ಸಂತಸವನ್ನು
ಇಮ್ಮಡಿಗೊಳಿಸಿದರು ಎಂದು ತಿಳಿಸಿದರು.

ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷಕ್ಕೆ ಪೂಜ್ಯ ತಂದೆಯವರು ಮತ್ತು ಮಾಜಿ ಶಾಸಕ ಟಿ. ಗುರುಸಿದ್ಧ‌ಗೌಡ ಮತ್ತು ನನ್ನನ್ನು ಪಕ್ಷಕ್ಕೆ ಅಧಿಕೃತವಾಗಿ
ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಅತ್ಯಂತ ಗೌರವಯುತವಾಗಿ ನಮ್ಮೆಲ್ಲರನ್ನೂ ನಡೆಸಿಕೊಂಡ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಸೇರಿದಂತೆ ಪಕ್ಷದ ಎಲ್ಲ ನಾಯಕರಿಗೂ ಕೃತಜ್ಞತೆ ಸಲ್ಲಿಸುತ್ತೇವೆ. ವೈಯುಕ್ತಿವಾಗಿ
ನಮಗಾದ ನೋವು, ಅವಮಾನಗಳನ್ನು ಮರೆತು, ಬಿಜೆಪಿಯನ್ನು ತಳಮಟ್ಟದಲ್ಲಿ ಗಟ್ಟಿಗೊಳಿಸಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಹಾಗೆಯೇ, ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಮಾಡಾಳ್ ಮಲ್ಲಿಕಾರ್ಜುನ ಅವರಿಗೂ ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ ಎಂದು ಡಾ. ರವಿಕುಮಾರ್ ಟಿ. ಜಿ. ಹೇಳಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment