SUDDIKSHANA KANNADA NEWS/ DAVANAGERE/ DATE-11-06-2025
ದಾವಣಗೆರೆ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ನೂತನ ಅಧ್ಯಕ್ಷರಾಗಿ ಕಾರಿಗನೂರು ಗಂಗಾಧರಪ್ಪ ಟಿ. ಬಿ, ಜಿಲ್ಲಾ ಉಪಾಧ್ಯಕ್ಷರಾಗಿ ಮಹಾಂತೇಶ್ ಒಣರೊಟ್ಟಿ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾರ್ಯದರ್ಶಿಯಾಗಿ ಬೆಳ್ಳೂಡಿ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಎಸ್. ತಣಿಗೆರೆ ಅವರನ್ನು ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರು ನೇಮಕ ಮಾಡಿ ಆದೇಶಿಸಿದ್ದಾರೆ.
ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯೂ ಆದ ಮಾಜಿ ಶಾಸಕ ಹೆಚ್. ಎಸ್ ಶಿವಶಂಕರ್, ಯುವ ಘಟಕದ ರಾಜ್ಯಾಧ್ಯಕ್ಷ ಬಿ ಜಿ .ಅಜಯ್ ಕುಮಾರ್ ಅವರು ಆದೇಶ ಪತ್ರ ನೀಡಿ ಕಾರಿಗನೂರು ಗಂಗಾಧರಪ್ಪ, ಮಹಾಂತೇಶ್
ಒಣರೊಟ್ಟಿ, ಬೆಳ್ಳೂಡಿ ಮಂಜುನಾಥ್, ಶಿವಕುಮಾರ್ ಎಸ್. ತಣಿಗೆರೆ ಅವರಿಗೆ ಗೌರವ ಸನ್ಮಾನ ಮಾಡಿ ಅಭಿನಂದಿಸಿದರು.
ನಿರ್ಗಮಿತ ಅಧ್ಯಕ್ಷ ಅಶೋಕ್ ಗೋಪನಾಳ್ ಅವರಿಗೆ ಪಂಚಮಸಾಲಿ ಸಮಾಜದಿಂದ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ ಎಂದು ಘಟಕದ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.