ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬುಸುಗುಟ್ಟಿದ ಶಾಮನೂರು ಶಿವಶಂಕರಪ್ಪ ಗುಟುರು: ಪತರಗುಟ್ಟಿದ ಟಗರು!

On: April 16, 2025 6:28 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-04-2025

ದಾವಣಗೆರೆ: ರಾಜ್ಯದಲ್ಲಿ ಜಾತಿಜನಗಣತಿ ವಾಗ್ಯುದ್ಧ ಕಾಂಗ್ರೆಸ್ ಪಕ್ಷದಲ್ಲಿಯೋ ಜೋರಾಗಿದೆ. ವರದಿ ಜಾರಿಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದರೆ, ಇತ್ತ ಕಾಂಗ್ರೆಸ್ ಪಕ್ಷದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಶಾಸಕರು ರೊಚ್ಚಿಗೆದ್ದಿದ್ದಾರೆ. ಯಾವುದೇ ಕಾರಣಕ್ಕೂ ಜಾತಿಗಣತಿ ವರದಿ ಜಾರಿ ಮಾಡಬಾರದು ಎಂದು ಪಟ್ಟುಹಿಡಿದಿದ್ದರೆ, ಮತ್ತೊಮ್ಮೆ ವರದಿ ತಯಾರಿಸುವಂತೆ ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯರು ಮಾತ್ರ ಏಪ್ರಿಲ್ 17ಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದು ಸಚಿವ ಸಂಪುಟದಲ್ಲಿ ಭಾರೀ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರು ಈಗಾಗಲೇ ಗುಟುರು ಹಾಕಿದ್ದು, ಟಗರು ಎಂದೇ ಖ್ಯಾತರಾಗಿರುವ ಸಿದ್ದರಾಮಯ್ಯ ಅವರು ಪತರುಗುಟ್ಟಿದ್ದಾರೆ. ಲಿಂಗಾಯತ ಶಾಸಕರ ಕೆಂಗಣ್ಣಿಗೆ ಗುರಿಯಾಗಿರುವ ಸಿದ್ದರಾಮಯ್ಯರಿಗೆ ವರದಿ ಜಾರಿ ಸಂಬಂಧ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಹಿಂದೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಸಂಬಂಧ ಲಿಂಗಾಯತ ವಿರೋಧಿ ಹಣೆಪಟ್ಟಿ ಹೊಂದಿದ್ದ ಸಿದ್ದರಾಮಯ್ಯರಿಗೆ ಮತ್ತೆ ಕಳಂಕ ಬರುವ ಸಾಧ್ಯತೆ ನಿಚ್ಚಳವಾಗಿದೆ.

ಕಾಂಗ್ರೆಸ್ ಸರ್ಕಾರ ಬಂದ ಆರಂಭದಲ್ಲೇ ಶಾಮನೂರು ಶಿವಶಂಕರಪ್ಪ ಗುಟುರು ಹಾಕಿದ್ದರು. ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಉನ್ನತ ಹುದ್ದೆಯಲ್ಲಿ ಇರಲು ಬಿಡುತ್ತಿಲ್ಲ. ವಿನಾಕಾರಣ ತೊಂದರೆ ನೀಡಲಾಗುತ್ತಿದೆ ಎಂದು  ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರ ಸಾಕಷ್ಟು ಭುಗಿಲೆದ್ದಿತ್ತು. ಸಿದ್ದರಾಮಯ್ಯರಿಗೆ ಇರಿಸು ಮುರಿಸು ತಂದಿತ್ತು. ಮತ್ತೆ ಜಾತಿಜನಗಣತಿ ಭೂತ ಎದ್ದಿದ್ದು, ಮತ್ತೆ ಲಿಂಗಾಯತರು ಮತ್ತು ಒಕ್ಕಲಿಗರ ವಿರೋಧ ಕಟ್ಟಿಕೊಳ್ಳುವ ಆಂತಕವೂ ಇದೆ.

ಏನಂದ್ರು ಶಾಮನೂರು ಶಿವಶಂಕರಪ್ಪ?

ಕರ್ನಾಟಕ ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡುವುದಕ್ಕೆ ಆಗುತ್ತಾ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೀರಶೈವ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಒಕ್ಕಲಿಗರು ನಂತರದ ಸ್ಥಾನದಲ್ಲಿದ್ದಾರೆ. ಈ ಎರಡೂ ಸಮುದಾಯಗಳನ್ನೂ ಎದುರು ಹಾಕಿಕೊಂಡು ರಾಜ್ಯಭಾರ ಮಾಡುವುದಕ್ಕೆ ಆಗುವುದಿಲ್ಲ ಎಂದು ಗುಡುಗಿದರು.

ಜಾತಿ ಜನಗಣತಿ ವರದಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿರುವ ರಾಜ್ಯ ಸರ್ಕಾರಕ್ಕೆ ಮಾತಿನ ಚಾಟಿ ಬೀಸಿರುವ ಶಾಮನೂರು ಶಿವಶಂಕರಪ್ಪ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆಂದು ಸುಮ್ಮನೇ ಹೇಳುತ್ತಿದ್ದಾರಷ್ಟೇ. ರಾಜ್ಯದಲ್ಲಿ ವೀರಶೈವ ಲಿಂಗಾಯತರು ಫಸ್ಟ್, ಒಕ್ಕಲಿಗರು ಸೆಕೆಂಡ್ ಇದ್ದಾರೆ ಎಂದರು.

ನಮ್ಮನ್ನು ಎದುರು ಹಾಕಿಕೊಂಡು, ರಾಜ್ಯಭಾರ ಮಾಡುವುದಕ್ಕೆ ಆಗುತ್ತಾ, ಒಂದು ವೇಳೆ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡಿದ್ದೇ ಆದಲ್ಲಿ ವೀರಶೈವ ಲಿಂಗಾಯತರು ಹಾಗೂ ಒಕ್ಕಲಿಗರು ಇಬ್ಬರೂ ಸೇರಿಕೊಂಡೇ ಹೋರಾಟ ಮಾಡುತ್ತೇವೆ. ಈಗಾಗಲೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಭೆಯನ್ನೂ ನಡೆಸಿ, ಮುಂದಿನ ನಡೆಗಳ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಏನು ಹೇಳಿದ್ರು?

ಇನ್ನು ಕಲಬುರ್ಗಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯರು ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಜಾತಿಗಣತಿ ವರದಿ ರೂಪಿಸಲಾಗಿದೆ. ಯಾರಿಗೂ ಅನ್ಯಾಯವಾಗುವುದಿಲ್ಲ. ಏಪ್ರಿಲ್ 17ಕ್ಕೆ ಕರೆದಿರುವ ಸಚಿವ ಸಂಪುಟದಲ್ಲಿ
ಸುದೀರ್ಘವಾಗಿ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ. ಸ್ವಲ್ಪ ಮಟ್ಟಿಗೆ ತಣ್ಣಗಾದಂತೆ ಕಂಡಿರುವ ಸಿದ್ದರಾಮಯ್ಯರು ಪಟ್ಟು ಸಡಿಲಿಸುತ್ತಾರೋ? ಚರ್ಚೆಗೆ ಬಿಡುತ್ತಾರೋ? ಅಂಗೀಕಾರ ಮಾಡಿ ಲಿಂಗಾಯತರು ಮತ್ತು ಒಕ್ಕಲಿಗರ ವಿರೋಧ ಎದುರು
ಹಾಕಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment