Home ದಾವಣಗೆರೆ ಸಮಾಜಸೇವೆಗೆ ಜೀವನವನ್ನೇ ಮುಡಿಪಾಗಿಟ್ಟ ಶಾಮನೂರು ಶಿವಶಂಕರಪ್ಪ: ಡಿಸಿಎಂ ಡಿ. ಕೆ. ಶಿವಕುಮಾರ್ ಭಾವುಕ ನುಡಿ
ದಾವಣಗೆರೆನವದೆಹಲಿಬೆಂಗಳೂರು

ಸಮಾಜಸೇವೆಗೆ ಜೀವನವನ್ನೇ ಮುಡಿಪಾಗಿಟ್ಟ ಶಾಮನೂರು ಶಿವಶಂಕರಪ್ಪ: ಡಿಸಿಎಂ ಡಿ. ಕೆ. ಶಿವಕುಮಾರ್ ಭಾವುಕ ನುಡಿ

Share
Share

SUDDIKSHANA KANNADA NEWS/DAVANAGERE/DATE:14_12_2025

ಬೆಂಗಳೂರು: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಹೇಳಿದ್ದಾರೆ.

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *