ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರ ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸು ತೀವ್ರ ಭಾರವಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ ಸೂಚಿಸಿದ್ದಾರೆ.
ಶಾಸಕರಾಗಿ, ಸಚಿವರಾಗಿ ನಾಡಿನ ಪ್ರಗತಿಗೆ ಹಾಗೂ ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸಮಸ್ತ ಲಿಂಗಾಯತ-ವೀರಶೈವ ಸಮುದಾಯದ ಪ್ರಗತಿ ಹಾಗೂ ಒಗ್ಗಟ್ಟಿಗಾಗಿ ಶ್ರೀಯುತರು ನೀಡಿರುವ ಕೊಡುಗೆ ಅಪ್ರತಿಮವಾದುದು
ಎಂದು ತಿಳಿಸಿದ್ದಾರೆ.
ಆ ದೇವರು ಶ್ರೀಯುತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬವರ್ಗ ಹಾಗೂ ಅಭಿಮಾನಿಗಳಲ್ಲಿ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.





Leave a comment